22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ.14 ರಂದು ಭಜನಾ ಸತ್ಸಂಗ
ರಾಮಕೃಷ್ಣ ಕಾಟುಕುಕ್ಕೆ ಸಂಗೀತಾ ಹಾಡಿನೊಂದಿಗೆ ಕುಣಿತ ಭಜನೆ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಎದುರು ಮೈದಾನದಲ್ಲಿ ಜರಗಲಿರುವುದು.

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ದೀಪ ಪ್ರಜ್ವಲಿಸುವುದರೊಂದಿಗೆ ಮೈದಾನದಲ್ಲಿ
ಕುಣಿತ ಭಜನೆಯ ಉದ್ಘಾಟನೆಯನ್ನು ಅಳದಂಗಡಿ ಶ್ರೀ ಕ್ಲಿನಿಕ್ ನ ವೈದ್ಯರಾದ ಡಾ.ಎನ್.ಎಂ ತುಳುಪುಳೆ ನೆರವೇರಿಸಲಿದ್ದಾರೆ.

ಸಂಜೆ 7-30 ಕ್ಕೆ ನಡೆಯುವ ಧಾರ್ಮಿಕ ಸಮಾರಂಭದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಉದ್ಯಮಿಗಳಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಸುರೇಶ್ ಪೂಜಾರಿ ಮುಂಬಯಿ, ಹರೀಶ್ ಶೆಟ್ಟಿ ತುಮಕೂರು, ಶೇಖರ ದೇವಾಡಿಗ ಪಾಲಬೆ, ಪ್ರವೀಣ್ ಕುಮಾರ್ ಇಂದ್ರ, ಗೌತಮ್ ಜೈನ್ ಮೂಲ್ಕಿ ಅರಮನೆ, ಎಂ.ಗಂಗಾಧರ ಮಿತ್ತಮಾರು, ಉದ್ಯಮಿಗಳಾದ ಸುಂದರ ಹೆಗ್ಡೆ,ಕಲಾ ಪೋಷಕರಾದ ಬಿ.ಭುಜಬಲಿ ಧರ್ಮಸ್ಥಳ, ರಾಕೇಶ್ ಹೆಗ್ಡೆ ಬಳಂಜ, ಡಾ.ಶಶಿಧರ ಡೋಂಗ್ರೆ, ಪಿ.ಹೆಚ್.ಪ್ರಕಾಶ್ ಶೆಟ್ಟಿ ನೊಚ್ಚ,ರಾಜೇಶ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಸಂತೋಷ್ ಜೈನ್ ಬೆಳ್ತಂಗಡಿ, ಸದಾನಂದ ಆಚಾರ್ಯ ಸುಲ್ಕೇರಿ ಮೊಗ್ರು ಮುಂತಾದ ಗಣ್ಯಮಾನ್ಯರು ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಮೂಡಬಿದ್ರೆ ಪಿಂಗಾರ ಕಲಾವಿದರಿಂದ ಕದಂಬ ತುಳು ನಾಟಕ ನಡೆಯಲಿರುವುದು.

ಅಳದಂಗಡಿ ಅರಮನೆಯ ಶ್ರೀ ಶಿವಪ್ರಸಾದ್ ಅಜಿಲರು, ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಹಾಗೂ ಸುಪ್ರೀತ್ ಜೈನ್, ಹರೀಶ್ ವೈ ಚಂದ್ರಮ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya
error: Content is protected !!