23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

53 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಬಾಯಿ ಹುಣ್ಣು ಕಾಣಿಸಿಕೊಂಡು ಒಂದು ತಿಂಗಳಿನಿಂದ ಕಷ್ಟಪಡುತ್ತಿದ್ದರು. ಇತ್ತೀಚೆಗೆ ಬಾಯಿ ಹುಣ್ಣುವಿನಿಂದ ರಕ್ತಸ್ರಾವ ಕಂಡು ಬಂದಾಗ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇ.ಎನ್.ಟಿ ವೈದ್ಯರಾಗಿರುವ ಹೆಡ್ ಆಂಡ್ ನೆಕ್ ಆನ್ಕಾಲಜಿಯಲ್ಲಿ ಫೆಲೋಶಿಪ್ ಪಡೆದಿರುವ ಡಾ| ರೋಹನ್ ದೀಕ್ಷಿತ್ ಈ ರೋಗಿಯನ್ನು ಪರೀಕ್ಷಿಸಿದಾಗ ಬಾಯಿಯಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.


ಬಾಯಿಯ ಶಸ್ತ್ರಚಿಕಿತ್ಸೆ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದ್ದು, ರಕ್ತನಾಳಗಳಿಗೆ ತೊಂದರೆಯಾಗದಂತೆ ಬಾಯಿಯ ಶಸ್ತ್ರಚಿಕಿತ್ಸೆ ಮಾಡುವುದು ವೈದ್ಯರಿಗೆ ಸವಾಲಾಗಿರುತ್ತದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ| ರೋಹನ್ ದೀಕ್ಷಿತ್ ಯಶಸ್ವಿಯಾಗಿ ಈ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ರೋಗಿ ಚೇತರಿಸುತ್ತಿದ್ದಾರೆ. ಅರೆವಳಿಕೆ ತಜ್ಞರಾದ ಡಾ| ಚೈತ್ರಾ. ಆರ್ ಸಹಕರಿಸಿದರು.


ನಗರ ಪ್ರದೇಶದ ಆಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಹೈಟೆಕ್ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೇವೆ ಹಾಗೂ ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಗ್ರಾಮೀಣ ಜನತೆಗೆ ಮಿತದರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುತ್ತಿದೆ. ಈ ಆಸ್ಪತ್ರೆಯಲ್ಲಿ ಹಲವಾರು ಯಶಸ್ವಿ ಶಸ್ತ್ರಚಿಕಿತೆಗಳನ್ನು ನಡೆಸಲಾಗುತ್ತಿದ್ದು, ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya
error: Content is protected !!