July 23, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

53 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಬಾಯಿ ಹುಣ್ಣು ಕಾಣಿಸಿಕೊಂಡು ಒಂದು ತಿಂಗಳಿನಿಂದ ಕಷ್ಟಪಡುತ್ತಿದ್ದರು. ಇತ್ತೀಚೆಗೆ ಬಾಯಿ ಹುಣ್ಣುವಿನಿಂದ ರಕ್ತಸ್ರಾವ ಕಂಡು ಬಂದಾಗ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇ.ಎನ್.ಟಿ ವೈದ್ಯರಾಗಿರುವ ಹೆಡ್ ಆಂಡ್ ನೆಕ್ ಆನ್ಕಾಲಜಿಯಲ್ಲಿ ಫೆಲೋಶಿಪ್ ಪಡೆದಿರುವ ಡಾ| ರೋಹನ್ ದೀಕ್ಷಿತ್ ಈ ರೋಗಿಯನ್ನು ಪರೀಕ್ಷಿಸಿದಾಗ ಬಾಯಿಯಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.


ಬಾಯಿಯ ಶಸ್ತ್ರಚಿಕಿತ್ಸೆ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದ್ದು, ರಕ್ತನಾಳಗಳಿಗೆ ತೊಂದರೆಯಾಗದಂತೆ ಬಾಯಿಯ ಶಸ್ತ್ರಚಿಕಿತ್ಸೆ ಮಾಡುವುದು ವೈದ್ಯರಿಗೆ ಸವಾಲಾಗಿರುತ್ತದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ| ರೋಹನ್ ದೀಕ್ಷಿತ್ ಯಶಸ್ವಿಯಾಗಿ ಈ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ರೋಗಿ ಚೇತರಿಸುತ್ತಿದ್ದಾರೆ. ಅರೆವಳಿಕೆ ತಜ್ಞರಾದ ಡಾ| ಚೈತ್ರಾ. ಆರ್ ಸಹಕರಿಸಿದರು.


ನಗರ ಪ್ರದೇಶದ ಆಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಹೈಟೆಕ್ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೇವೆ ಹಾಗೂ ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಗ್ರಾಮೀಣ ಜನತೆಗೆ ಮಿತದರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುತ್ತಿದೆ. ಈ ಆಸ್ಪತ್ರೆಯಲ್ಲಿ ಹಲವಾರು ಯಶಸ್ವಿ ಶಸ್ತ್ರಚಿಕಿತೆಗಳನ್ನು ನಡೆಸಲಾಗುತ್ತಿದ್ದು, ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!