25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

53 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಬಾಯಿ ಹುಣ್ಣು ಕಾಣಿಸಿಕೊಂಡು ಒಂದು ತಿಂಗಳಿನಿಂದ ಕಷ್ಟಪಡುತ್ತಿದ್ದರು. ಇತ್ತೀಚೆಗೆ ಬಾಯಿ ಹುಣ್ಣುವಿನಿಂದ ರಕ್ತಸ್ರಾವ ಕಂಡು ಬಂದಾಗ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇ.ಎನ್.ಟಿ ವೈದ್ಯರಾಗಿರುವ ಹೆಡ್ ಆಂಡ್ ನೆಕ್ ಆನ್ಕಾಲಜಿಯಲ್ಲಿ ಫೆಲೋಶಿಪ್ ಪಡೆದಿರುವ ಡಾ| ರೋಹನ್ ದೀಕ್ಷಿತ್ ಈ ರೋಗಿಯನ್ನು ಪರೀಕ್ಷಿಸಿದಾಗ ಬಾಯಿಯಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.


ಬಾಯಿಯ ಶಸ್ತ್ರಚಿಕಿತ್ಸೆ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದ್ದು, ರಕ್ತನಾಳಗಳಿಗೆ ತೊಂದರೆಯಾಗದಂತೆ ಬಾಯಿಯ ಶಸ್ತ್ರಚಿಕಿತ್ಸೆ ಮಾಡುವುದು ವೈದ್ಯರಿಗೆ ಸವಾಲಾಗಿರುತ್ತದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ| ರೋಹನ್ ದೀಕ್ಷಿತ್ ಯಶಸ್ವಿಯಾಗಿ ಈ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ರೋಗಿ ಚೇತರಿಸುತ್ತಿದ್ದಾರೆ. ಅರೆವಳಿಕೆ ತಜ್ಞರಾದ ಡಾ| ಚೈತ್ರಾ. ಆರ್ ಸಹಕರಿಸಿದರು.


ನಗರ ಪ್ರದೇಶದ ಆಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಹೈಟೆಕ್ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೇವೆ ಹಾಗೂ ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಗ್ರಾಮೀಣ ಜನತೆಗೆ ಮಿತದರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುತ್ತಿದೆ. ಈ ಆಸ್ಪತ್ರೆಯಲ್ಲಿ ಹಲವಾರು ಯಶಸ್ವಿ ಶಸ್ತ್ರಚಿಕಿತೆಗಳನ್ನು ನಡೆಸಲಾಗುತ್ತಿದ್ದು, ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya
error: Content is protected !!