April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

ಪುದುವೆಟ್ಟು : ಎಲ್ಲರೂ ಸೇರಿ ಒಂದೇ ಮನಸ್ಸಿನಿಂದ ಕೆಲಸ ಮಾಡಿದಾಗ ಸಂಸ್ಥೆಯ ಪ್ರಗತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಬಿ ಸೋಮಶೇಖರ ಶೆಟ್ಟಿ ಅಭಿಪ್ರಾಯಪಟ್ಟರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ.ಎಸ್ ಸತೀಶ್ ಚಂದ್ರ ಅವರ ಮಾರ್ಗದರ್ಶನದಂತೆ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ ಸೋಮಶೇಖರ್ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನ ತಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುಗೆ ಆಗಮಿಸಿ ಶಿಕ್ಷಕರ ವೈಯಕ್ತಿಕ ದಾಖಲೆ ಮತ್ತು ಪ್ರಗತಿ ಪರಿಶೀಲನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನವೇ ಶಿಕ್ಷಣ ಸಂಸ್ಥೆಗಳ ಗುರಿ ಎಂದು ತಿಳಿಸಿದರು. ಸಂಸ್ಥೆಯ ಪ್ರಗತಿಗೆ ಉತ್ತಮ ನಾಯಕತ್ವ ಅಗತ್ಯ ಈ ನಾಯಕತ್ವ ಪುದುವೆಟ್ಟು ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದೆ. ಮುಖ್ಯ ಶಿಕ್ಷಕರು ಮತ್ತು ಶಾಲೆಯ ಶಿಕ್ಷಕರ ವೃಂದ ಒಗ್ಗಟ್ಟಿನಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಕಲಿಕೆಗೆ ಪೂರಕ ವಾತಾವರಣ ಪುದುವೆಟ್ಟು ಶಾಲೆಯಲ್ಲಿ ಇರುವುದರಿಂದ ಪಠ್ಯ ಮತ್ತು ಪಠ್ಯೇತರ ವಿಷಯಗಳಿಗೆ ಹೆಚ್ಚಿನ ಒತ್ತು ನೀಡಿ ಪಾಠ ಪ್ರವಚನ ನೀಡಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya
error: Content is protected !!