ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಬೆಳ್ತಂಗಡಿ: ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿಯೋವ೯ರು ಅತಿಕ್ರಮಣ ಮಾಡಿ, ಕೃಷಿ ಕೆಲಸ ಮಾಡುತ್ತಿದ್ದು ಇದರಿಂದ ರಸ್ತೆಗೆ ಕಲ್ಲು ಮಣ್ಣು ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ, ನ್ಯಾಯ ಸಿಗಬೇಕೆಂದು ಒತ್ತಾಯಿಸಿ ಹಲ್ಲಂದೋಡಿ ಸಂತೋಷ್ ಶೆಟ್ಟಿ ಪಡಂಗಡಿ ಗ್ರಾಮಕರಣೀಕರ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ.

ಕಳೆದ ಕೆಲ ಸಮಯದಿಂದ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿ ಈ ಭಾಗದಲ್ಲಿ ಹಿಟಾಚಿಯಲ್ಲಿ ಕೆಲಸ ನಡೆಸುತ್ತಿದ್ದಾರೆ. ಇದರಿಂದ ರಸ್ತೆಗೆ ಮಣ್ಣು ಕಲ್ಲುಗಳು ಬಿದ್ದು ಕೆಲವು ಅಪಘಾತಗಳು ಸಂಭವಿಸಿದೆ. ಇದರ ಬಗ್ಗೆ ಕೇಳಿದರೆ ನಮ್ಮ ಮೇಲೆಯೆ ಪ್ರಕರಣ ದಾಖಲಿಸುತ್ತಾರೆ. ನನಗೆ ನ್ಯಾಯ ದೊರೆಯುವವರೆಗೆ ನಾನು ಧರಣಿಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಸಂತೋಷ್ ಶೆಟ್ಟಿ ಹಲ್ಲಂದೋಡಿ ತಿಳಿಸಿದ್ದಾರೆ.

Leave a Comment

error: Content is protected !!