July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

ಬೆಳ್ತಂಗಡಿ: ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಿದ್ದು ಜ.22ರಂದು ಶ್ರೀರಾಮ ಪ್ರತಿಷ್ಠೆಯ ಸುವರ್ಣ ಕ್ಷಣಕ್ಕಾಗಿ ಸಂಪೂರ್ಣ ವಿಶ್ವವೇ ಸಡಗರ, ಸಂಭ್ರಮ, ಕಾತರ, ಕುತೂಹಲದಿಂದ ಕಾಯುತ್ತಿದೆ. ಹೀಗಿರುವಾಗ ಕಾಂಗ್ರೇಸ್ ಪಕ್ಷ ಮಾತ್ರ ತುಷ್ಟೀಕರಣದ ತನ್ನ ನೀತಿಗೆ ಬಲವಾಗಿ ಅಂಟಿಕೊಂಡಿರುವುದು ಮಾತ್ರ ವಿಪರ್ಯಾಸ ಎಂದು ವಿಧಾನಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ.


ರಾಮ ಮಂದಿರದ ಬಗ್ಗೆ ಜನರ ಸ್ಪಂದನೆ, ಸಂಭ್ರಮ ಕಾಂಗ್ರೆಸಿಗರ ಮನಸ್ಥಿತಿಯನ್ನು ಅಯೋಮಯಮಾಡಿದೆ. ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದವರು, ಮಂದಿರ ಆಗಬಾರದು ಎಂದು ಪ್ರಯತ್ನಪಟ್ಟವರು ಇಂದು ಹೌಹಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮ ಭಕ್ತರ ಮೇಲಿನ ೩೧ ವರ್ಷ ಹಳೆಯದಾದ ಪ್ರಕರಣವನ್ನು ಈಗ ಕೆದಕಿ ಸಂಭ್ರಮಕ್ಕೆ ಅಡ್ಡಿ ಮಾಡುತ್ತಿರುವುದು ಇದಕ್ಕೆ ಸಾಕ್ಷಿ. ಗೃಹ ಸಚಿವರು, ಹಳೆಯ ಕೇಸುಗಳನ್ನು ಕ್ಲೀಯರ್ ಮಾಡುತ್ತಿದ್ದೇವೆ ಎಂಬ ಬಾಲಿಶ ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ ಅಂದು ಕೆ.ಜೆ ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ದೊಂಬಿ ನಡೆಸಿ, ಠಾಣೆಗೆ ಬೆಂಕಿಹಚ್ಚಿದ ಆರೋಪಿಗಳನ್ನು ಈಗೇಕೆ ಬಂಧಿಸುತ್ತಿಲ್ಲ? ಚಿಕಮಗಳೂರಿನ ದತ್ತಪೀಠದ ಹೋರಾಟಗಾರರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೇಸ್ ಸರಕಾರ ಬೆದರಿಕೆ ಹಾಕಿದೆ. ಒಟ್ಟಾರೆ ರಾಮ ಮಂದಿರದ ಉದ್ಘಾಟನೆ ಕಾಂಗ್ರೆಸಿಗರನ್ನು ಕಂಗೆಡಿಸಿದೆ ಎನ್ನುವುದು ಸ್ಪಷ್ಟ ಎಂದಿದ್ದಾರೆ.
ಇನ್ನೊಂದೆಡೆ ಬಿ.ಕೆ. ಹರಿಪ್ರಸಾದ್ ಅವರು ಗೋಧ್ರಾದಲ್ಲಿ ಆದಂತೆ ಆಗಬಹುದು ಎಂಬ ಹೇಳಿಕೆ ನೀಡಿದ್ದಾರೆ. ಅವರ ಬಳಿ ಈ ಬಗ್ಗೆ ಮಾಹಿತಿಗಳಿದ್ದಲ್ಲಿ ಸರಕಾರದ ಮುಖ್ಯಸ್ಥರಿಗೆ ತಿಳಿಸಬಹುದಲ್ಲಾ? ಅದು ಬಿಟ್ಟು ಹೆದರಿಸುವುದರ ಹಿಂದಿನ ಷಡ್ಯಂತ್ರವೇನು? ಅದಲ್ಲದೆ ಹಿಂದೂ ರಾಷ್ಟ್ರದ ಕುರಿತು ಸಿದ್ದರಾಮಯ್ಯನವರ ಮಗನ ಮಾತು, ಸಚಿವ ಆಂಜನೇಯ ಅವರ ಹೇಳಿಕೆ, ರಾಮ ಮಂತ್ರಾಕ್ಷತೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹಗುರ ಮಾತುಗಳನ್ನು ಜನ ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ರೂ.೧೦,೦೦೦ ಕೋಟಿಗಳನ್ನು ಅಲ್ಪಸಂಖ್ಯಾತರಿಗೆ ಮೀಸಲಿಟ್ಟಿರುವುದು ತುಷ್ಟೀಕರಣದ ಪರಾಕಾಷ್ಠೆಯಾಗಿದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya
error: Content is protected !!