26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ಸಮಾರಂಭವು ಜ.13 ರಂದು ಕಡಿರುದ್ಯಾವರ ಶಾಖಾ ವಠಾರದಲ್ಲಿ ಜರಗಲಿರುವುದು.


ನೂತನ ಕಟ್ಟಡದ ಉದ್ಘಾಟನೆಯನ್ನು ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ನೆರವೇರಿಸಲಿದ್ದಾರೆ. ಸಭಾ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್, ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಪ್ರತಾಪ್‌ಸಿಂಹ ನಾಯಕ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರುಗಳಾದ ಬಿ. ನಿರಂಜನ್ ಬಾವಂತಬೆಟ್ಟು, ಶಶಿಕುಮಾರ್ ರೈ. ಬಿ., ಬೆಂಗಳೂರು ನಬಾರ್ಡ್ ಸಹಾಯಕ ಮಹಾಪ್ರಬಂಧಕಿ ಸಂಗೀತಾ ಕರ್ತಾ, ಮಂಗಳೂರು ಸಹಕಾರ ಸಂಘಗಳ ಉಪನಿಂಬಧಕ ರಮೇಶ್ ಹೆಚ್.ಎನ್., ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಬಿ.ವಿ. ಪ್ರತಿಮಾ, ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಅಧ್ಯಕ್ಷ ವಿನಯಚಂದ್ರ ಗೌಡ ವಿ., ಕಡಿರುದ್ಯಾವರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ ಗೌಡ, ಕಡಿರುದ್ಯಾವರ ಉದ್ದಾರ (ಕಟ್ಟಡ ನಿರ್ಮಿಸಲು ನಿವೇಶನ ನೀಡಿದವರು) ನಿವೃತ್ತ ಶಿಕ್ಷಕ ಜನಾರ್ದನ ಗೌಡ, ಕಡಿರುದ್ಯಾವರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಭಾಗವಹಿಸಲಿದ್ದಾರೆ.

Related posts

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya
error: Content is protected !!