ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭೆ ಸಾಮರ್ಥ್ಯಗಳನ್ನು ಗುರುತಿಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ ಆಯ್ದ ಶಾಲೆಗಳಲ್ಲಿ ಸ್ಪರ್ಧಾ ಚಟುವಟಿಕೆ,ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವಿಜೇತ ಹಾಗೂ ಸ್ಪರ್ಧಿಸುವ ವಿದ್ಯಾರ್ಥಿಗಳನ್ನು ಸಂಘಟನೆ ಗುರುತಿಸಿ ಗೌರವಿಸಲಿದೆ..ಈ ಬಗೆಗೆ ಹಲವು ಶಾಲಾ ಮುಖ್ಯೋಪಾಧ್ಯಾಯರು, ಎಸ್ ಡಿ ಎಂ ಸಿ ಅಧ್ಯಕ್ಷರುಗಳಿಗೆ ಸಂಘಟನೆಯ ಸಂಸ್ಥಾಪಕರಾದ ಸಂದೀಪ್ ಎಸ್ ನೀರಲ್ಕೆ ಹಾಗೂ ಪದಾಧಿಕಾರಿಗಳು ಮಾಹಿತಿ ಒದಗಿಸಿದರು.

Leave a Comment

error: Content is protected !!