23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಮಾಲೋಚನಾ ಸಭೆಯು ಜ.9ರಂದು ಮಂಗಳೂರಿನಲ್ಲಿ ನಡೆಯಿತು.

ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ ಪತ್ರಿಕೆಯನ್ನು ಪ್ರತಿಯೊಂದು ಕ್ಷೇತ್ರಕ್ಕೂ ಕಳುಹಿಸಿಕೊಡಬೇಕೆಂದು ತೀರ್ಮಾನಿಸಲಾಯಿತು.

ಇದೇ ಸಮಯದಲ್ಲಿ ಶೈಲೇಂದ್ರ ಸುವರ್ಣ ರವರನ್ನು ಜಾತ್ರೋತ್ಸವದ ಕಾರ್ಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಂಕನಾಡಿ ಗರಡಿಯ ಮುಖ್ಯಸ್ಥ ಕೆ ಚಿತ್ತರಂಜನ್ ಕಂಕನಾಡಿ, ಆಡಳಿತ ಸಮಿತಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ, ರಾಜಶೇಖರ್ ಕೋಟ್ಯಾನ್, ಎಸ್ ಆರ್ ಶೈಲೇಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಪೂಜಾರಿ ಬಳೆಂಜ, ಎಂ ಜಯನಂದ ಪೂಜಾರಿ, ಸಂತೋಷ್ ಪೂಜಾರಿ ಉಗ್ಗೇಲ್ ಬೆಟ್ಟು, ಶ್ರೀಮತಿ ಶುಭ ರಾಜೇಂದ್ರ ಪೂಜಾರಿ, ಶ್ರೀ ಜಯರಾಮ ಪೂಜಾರಿ ಸುಳ್ಯ, ಜಯರಾಮ್ ಬಂಗೇರ ಬೆಳ್ತಂಗಡಿ, ಶ್ರೀಮತಿ ವಿದ್ಯಾ ರಾಕೇಶ್, ಶೇಖರ್ ಅಮೀನ್ ಮರೋಲಿ, ಹರೀಶ ಸನಿಲ್, ಮಂಗಳೂರು. ಪೃಥ್ವಿರಾಜ್ ಎಂ ಕಂಕನಾಡಿ, ವಿಶ್ವನಾಥ್ ಕುಂದರ್ ಶಕ್ತಿನಗರ, ಕುಸುಮಾಕರ್ ಕುಂಪಲ, ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ, ದೀಪಕ್ ಕೋಟ್ಯಾನ್ ಧನ್ಯವಾದವಿತ್ತರು.

Related posts

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya
error: Content is protected !!