32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

ಬಳಂಜ: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಅಯ್ಯಪ್ಪ ಭಕ್ತ ವೃಂದ ಬಳಂಜ ಬದಿನಡೆ ಇದರ ವತಿಯಿಂದ ಜ.12 ರಂದು ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಗುರುಸ್ವಾಮಿಗಳ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ವೃತಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಮತ್ತು ಅಯ್ಯಪ್ಪ ಪೂಜೆಯು ಬದಿನಡೆ ಕ್ಷೇತ್ರದಲ್ಲಿ ನಡೆಯಲಿದೆ.

ಹಲವು ವರ್ಷಗಳಿಂದ ಇಲ್ಲಿಂದ ಭಕ್ತರು ಶಬರಿಮಲೆ ಯಾತ್ರೆಯನ್ನು ಮಾಡುತ್ತಿದ್ದು ಸುಂದರವಾದ ಶಿಲಾಮಯ ಅಯ್ಯಪ್ಪ ಸ್ವಾಮಿಯ ದೇಗುಲವಿದ್ದು ಹತ್ತಿರದಲ್ಲಿ ಫಲ್ಗುಣಿ ನದಿ ಹರಿಯುತ್ತಿದೆ.


ಮಾಲಾಧಾರಿಗಳಾದ ಸದಾನಂದ ಸಾಲಿಯಾನ್, ಸತೀಶ್ ಬಿಕೆ, ವಿಜಯ ಹೆಗ್ಡೆ, ಪ್ರವೀಣ್ ಕುಮಾರ್ ಲಾಂತ್ಯಾರ್, ಚಂದ್ರಶೇಖರ್ ಪಿಟ್ಟರ್, ದರಣೇಂದ್ರ ಜೈನ್, ಜಯ ಶೆಟ್ಟಿ ನಾಲ್ಕೂರು ಸೇರಿದಂತೆ 15 ಮಂದಿ ಅಯ್ಯಪ್ಪ ಭಕ್ತರು ಮಾಲೆ ಹಾಕಿದ್ದು ಮಕರ ಜ್ಯೋತಿಯ ಪುಣ್ಯ ಕಾಲದಲ್ಲಿ ಶಬರಿಮಲೆ ಯಾತ್ರೆ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!