April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

ಬಳಂಜ: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಅಯ್ಯಪ್ಪ ಭಕ್ತ ವೃಂದ ಬಳಂಜ ಬದಿನಡೆ ಇದರ ವತಿಯಿಂದ ಜ.12 ರಂದು ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಗುರುಸ್ವಾಮಿಗಳ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ವೃತಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಮತ್ತು ಅಯ್ಯಪ್ಪ ಪೂಜೆಯು ಬದಿನಡೆ ಕ್ಷೇತ್ರದಲ್ಲಿ ನಡೆಯಲಿದೆ.

ಹಲವು ವರ್ಷಗಳಿಂದ ಇಲ್ಲಿಂದ ಭಕ್ತರು ಶಬರಿಮಲೆ ಯಾತ್ರೆಯನ್ನು ಮಾಡುತ್ತಿದ್ದು ಸುಂದರವಾದ ಶಿಲಾಮಯ ಅಯ್ಯಪ್ಪ ಸ್ವಾಮಿಯ ದೇಗುಲವಿದ್ದು ಹತ್ತಿರದಲ್ಲಿ ಫಲ್ಗುಣಿ ನದಿ ಹರಿಯುತ್ತಿದೆ.


ಮಾಲಾಧಾರಿಗಳಾದ ಸದಾನಂದ ಸಾಲಿಯಾನ್, ಸತೀಶ್ ಬಿಕೆ, ವಿಜಯ ಹೆಗ್ಡೆ, ಪ್ರವೀಣ್ ಕುಮಾರ್ ಲಾಂತ್ಯಾರ್, ಚಂದ್ರಶೇಖರ್ ಪಿಟ್ಟರ್, ದರಣೇಂದ್ರ ಜೈನ್, ಜಯ ಶೆಟ್ಟಿ ನಾಲ್ಕೂರು ಸೇರಿದಂತೆ 15 ಮಂದಿ ಅಯ್ಯಪ್ಪ ಭಕ್ತರು ಮಾಲೆ ಹಾಕಿದ್ದು ಮಕರ ಜ್ಯೋತಿಯ ಪುಣ್ಯ ಕಾಲದಲ್ಲಿ ಶಬರಿಮಲೆ ಯಾತ್ರೆ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

Related posts

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya
error: Content is protected !!