September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

ಬಳಂಜ: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಅಯ್ಯಪ್ಪ ಭಕ್ತ ವೃಂದ ಬಳಂಜ ಬದಿನಡೆ ಇದರ ವತಿಯಿಂದ ಜ.12 ರಂದು ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಗುರುಸ್ವಾಮಿಗಳ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ವೃತಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಮತ್ತು ಅಯ್ಯಪ್ಪ ಪೂಜೆಯು ಬದಿನಡೆ ಕ್ಷೇತ್ರದಲ್ಲಿ ನಡೆಯಲಿದೆ.

ಹಲವು ವರ್ಷಗಳಿಂದ ಇಲ್ಲಿಂದ ಭಕ್ತರು ಶಬರಿಮಲೆ ಯಾತ್ರೆಯನ್ನು ಮಾಡುತ್ತಿದ್ದು ಸುಂದರವಾದ ಶಿಲಾಮಯ ಅಯ್ಯಪ್ಪ ಸ್ವಾಮಿಯ ದೇಗುಲವಿದ್ದು ಹತ್ತಿರದಲ್ಲಿ ಫಲ್ಗುಣಿ ನದಿ ಹರಿಯುತ್ತಿದೆ.


ಮಾಲಾಧಾರಿಗಳಾದ ಸದಾನಂದ ಸಾಲಿಯಾನ್, ಸತೀಶ್ ಬಿಕೆ, ವಿಜಯ ಹೆಗ್ಡೆ, ಪ್ರವೀಣ್ ಕುಮಾರ್ ಲಾಂತ್ಯಾರ್, ಚಂದ್ರಶೇಖರ್ ಪಿಟ್ಟರ್, ದರಣೇಂದ್ರ ಜೈನ್, ಜಯ ಶೆಟ್ಟಿ ನಾಲ್ಕೂರು ಸೇರಿದಂತೆ 15 ಮಂದಿ ಅಯ್ಯಪ್ಪ ಭಕ್ತರು ಮಾಲೆ ಹಾಕಿದ್ದು ಮಕರ ಜ್ಯೋತಿಯ ಪುಣ್ಯ ಕಾಲದಲ್ಲಿ ಶಬರಿಮಲೆ ಯಾತ್ರೆ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya
error: Content is protected !!