24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

ಬಳಂಜ: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಅಯ್ಯಪ್ಪ ಭಕ್ತ ವೃಂದ ಬಳಂಜ ಬದಿನಡೆ ಇದರ ವತಿಯಿಂದ ಜ.12 ರಂದು ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಗುರುಸ್ವಾಮಿಗಳ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ವೃತಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಮತ್ತು ಅಯ್ಯಪ್ಪ ಪೂಜೆಯು ಬದಿನಡೆ ಕ್ಷೇತ್ರದಲ್ಲಿ ನಡೆಯಲಿದೆ.

ಹಲವು ವರ್ಷಗಳಿಂದ ಇಲ್ಲಿಂದ ಭಕ್ತರು ಶಬರಿಮಲೆ ಯಾತ್ರೆಯನ್ನು ಮಾಡುತ್ತಿದ್ದು ಸುಂದರವಾದ ಶಿಲಾಮಯ ಅಯ್ಯಪ್ಪ ಸ್ವಾಮಿಯ ದೇಗುಲವಿದ್ದು ಹತ್ತಿರದಲ್ಲಿ ಫಲ್ಗುಣಿ ನದಿ ಹರಿಯುತ್ತಿದೆ.


ಮಾಲಾಧಾರಿಗಳಾದ ಸದಾನಂದ ಸಾಲಿಯಾನ್, ಸತೀಶ್ ಬಿಕೆ, ವಿಜಯ ಹೆಗ್ಡೆ, ಪ್ರವೀಣ್ ಕುಮಾರ್ ಲಾಂತ್ಯಾರ್, ಚಂದ್ರಶೇಖರ್ ಪಿಟ್ಟರ್, ದರಣೇಂದ್ರ ಜೈನ್, ಜಯ ಶೆಟ್ಟಿ ನಾಲ್ಕೂರು ಸೇರಿದಂತೆ 15 ಮಂದಿ ಅಯ್ಯಪ್ಪ ಭಕ್ತರು ಮಾಲೆ ಹಾಕಿದ್ದು ಮಕರ ಜ್ಯೋತಿಯ ಪುಣ್ಯ ಕಾಲದಲ್ಲಿ ಶಬರಿಮಲೆ ಯಾತ್ರೆ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

Related posts

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!