23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

ಮಡಂತ್ಯಾರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡ ಮಚ್ಚಿನ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ಸ್ ಒಕ್ಕೂಟ ಮಡಂತ್ಯಾರು ವಲಯ ಇವರ ಸಹಕಾರದಲ್ಲಿ 10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಮಡಂತ್ಯಾರು ಶಿಶು ವಿಹಾರ ಮಹಿಳಾ ಮಂಡಲ ಕಟ್ಟಡ ಸಭಾಂಗಣದಲ್ಲಿ ಜ 10 ರಂದು ನಡೆಯಿತು .

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇಲ್ಲಿಯ ಕಾರ್ಯನಿರ್ವಾಣ ಅಧಿಕಾರಿ ಸಚಿನ್ ಹೆಗ್ಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿ ಮಹಿಳೆಯರು ತರಬೇತಿ ಪಡೆಯುವುದರೊಂದಿಗೆ ಬ್ಯಾಂಕ್ ಸಾಲದ ಸೌಲಭ್ಯ ಪಡೆದು ಉದ್ಯಮದಲ್ಲಿ ಯಶಸ್ವಿಯಾಗಬೇಕು ಎಂದು ಕರೆ ನೀಡಿದರು ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ವ್ಯವಸ್ಥಾಪಕರಾದ ಜೀವನ್ ಕೊಲ್ಯ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್, ಟೈಲರ್ ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಶಶಿಕಲ ಗೋಪಾಲ್ ಪುಂಜಾಲಕಟ್ಟೆ. ಮಹಿಳಾ ಮಂಡಲ (ರಿ) ಇದರ ಅಧ್ಯಕ್ಷೆ ಲೂಸಿ ಕಾರ್ಲೊ , ಮಡಂತ್ಯಾರು ವಲಯ ಸಮಿತಿ ಪದಾಧಿಕಾರಿಗಳು ತರಬೇತುದಾರರಾದ ಸುಮನಾ ಉಪಸ್ಥಿತರಿದ್ದರು .

ಸುಮಲತಾ ಕಾರ್ಯಕ್ರಮ ನಿರೂಪಣೆ ಮಾಡಿದರು ಒಟ್ಟು 28 ಮಹಿಳೆಯರು 10 ದಿವಸದ ತರಬೇತಿಯನ್ನು ಪಡೆಯಲಿದ್ದಾರೆ .

Related posts

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!