23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

ಮಡಂತ್ಯಾರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡ ಮಚ್ಚಿನ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ಸ್ ಒಕ್ಕೂಟ ಮಡಂತ್ಯಾರು ವಲಯ ಇವರ ಸಹಕಾರದಲ್ಲಿ 10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಮಡಂತ್ಯಾರು ಶಿಶು ವಿಹಾರ ಮಹಿಳಾ ಮಂಡಲ ಕಟ್ಟಡ ಸಭಾಂಗಣದಲ್ಲಿ ಜ 10 ರಂದು ನಡೆಯಿತು .

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇಲ್ಲಿಯ ಕಾರ್ಯನಿರ್ವಾಣ ಅಧಿಕಾರಿ ಸಚಿನ್ ಹೆಗ್ಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿ ಮಹಿಳೆಯರು ತರಬೇತಿ ಪಡೆಯುವುದರೊಂದಿಗೆ ಬ್ಯಾಂಕ್ ಸಾಲದ ಸೌಲಭ್ಯ ಪಡೆದು ಉದ್ಯಮದಲ್ಲಿ ಯಶಸ್ವಿಯಾಗಬೇಕು ಎಂದು ಕರೆ ನೀಡಿದರು ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ವ್ಯವಸ್ಥಾಪಕರಾದ ಜೀವನ್ ಕೊಲ್ಯ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್, ಟೈಲರ್ ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಶಶಿಕಲ ಗೋಪಾಲ್ ಪುಂಜಾಲಕಟ್ಟೆ. ಮಹಿಳಾ ಮಂಡಲ (ರಿ) ಇದರ ಅಧ್ಯಕ್ಷೆ ಲೂಸಿ ಕಾರ್ಲೊ , ಮಡಂತ್ಯಾರು ವಲಯ ಸಮಿತಿ ಪದಾಧಿಕಾರಿಗಳು ತರಬೇತುದಾರರಾದ ಸುಮನಾ ಉಪಸ್ಥಿತರಿದ್ದರು .

ಸುಮಲತಾ ಕಾರ್ಯಕ್ರಮ ನಿರೂಪಣೆ ಮಾಡಿದರು ಒಟ್ಟು 28 ಮಹಿಳೆಯರು 10 ದಿವಸದ ತರಬೇತಿಯನ್ನು ಪಡೆಯಲಿದ್ದಾರೆ .

Related posts

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya
error: Content is protected !!