September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

ಮಡಂತ್ಯಾರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡ ಮಚ್ಚಿನ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ಸ್ ಒಕ್ಕೂಟ ಮಡಂತ್ಯಾರು ವಲಯ ಇವರ ಸಹಕಾರದಲ್ಲಿ 10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಮಡಂತ್ಯಾರು ಶಿಶು ವಿಹಾರ ಮಹಿಳಾ ಮಂಡಲ ಕಟ್ಟಡ ಸಭಾಂಗಣದಲ್ಲಿ ಜ 10 ರಂದು ನಡೆಯಿತು .

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇಲ್ಲಿಯ ಕಾರ್ಯನಿರ್ವಾಣ ಅಧಿಕಾರಿ ಸಚಿನ್ ಹೆಗ್ಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿ ಮಹಿಳೆಯರು ತರಬೇತಿ ಪಡೆಯುವುದರೊಂದಿಗೆ ಬ್ಯಾಂಕ್ ಸಾಲದ ಸೌಲಭ್ಯ ಪಡೆದು ಉದ್ಯಮದಲ್ಲಿ ಯಶಸ್ವಿಯಾಗಬೇಕು ಎಂದು ಕರೆ ನೀಡಿದರು ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ವ್ಯವಸ್ಥಾಪಕರಾದ ಜೀವನ್ ಕೊಲ್ಯ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್, ಟೈಲರ್ ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಶಶಿಕಲ ಗೋಪಾಲ್ ಪುಂಜಾಲಕಟ್ಟೆ. ಮಹಿಳಾ ಮಂಡಲ (ರಿ) ಇದರ ಅಧ್ಯಕ್ಷೆ ಲೂಸಿ ಕಾರ್ಲೊ , ಮಡಂತ್ಯಾರು ವಲಯ ಸಮಿತಿ ಪದಾಧಿಕಾರಿಗಳು ತರಬೇತುದಾರರಾದ ಸುಮನಾ ಉಪಸ್ಥಿತರಿದ್ದರು .

ಸುಮಲತಾ ಕಾರ್ಯಕ್ರಮ ನಿರೂಪಣೆ ಮಾಡಿದರು ಒಟ್ಟು 28 ಮಹಿಳೆಯರು 10 ದಿವಸದ ತರಬೇತಿಯನ್ನು ಪಡೆಯಲಿದ್ದಾರೆ .

Related posts

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya
error: Content is protected !!