22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

ಮಡಂತ್ಯಾರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡ ಮಚ್ಚಿನ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ಸ್ ಒಕ್ಕೂಟ ಮಡಂತ್ಯಾರು ವಲಯ ಇವರ ಸಹಕಾರದಲ್ಲಿ 10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಮಡಂತ್ಯಾರು ಶಿಶು ವಿಹಾರ ಮಹಿಳಾ ಮಂಡಲ ಕಟ್ಟಡ ಸಭಾಂಗಣದಲ್ಲಿ ಜ 10 ರಂದು ನಡೆಯಿತು .

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇಲ್ಲಿಯ ಕಾರ್ಯನಿರ್ವಾಣ ಅಧಿಕಾರಿ ಸಚಿನ್ ಹೆಗ್ಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿ ಮಹಿಳೆಯರು ತರಬೇತಿ ಪಡೆಯುವುದರೊಂದಿಗೆ ಬ್ಯಾಂಕ್ ಸಾಲದ ಸೌಲಭ್ಯ ಪಡೆದು ಉದ್ಯಮದಲ್ಲಿ ಯಶಸ್ವಿಯಾಗಬೇಕು ಎಂದು ಕರೆ ನೀಡಿದರು ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ವ್ಯವಸ್ಥಾಪಕರಾದ ಜೀವನ್ ಕೊಲ್ಯ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್, ಟೈಲರ್ ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಶಶಿಕಲ ಗೋಪಾಲ್ ಪುಂಜಾಲಕಟ್ಟೆ. ಮಹಿಳಾ ಮಂಡಲ (ರಿ) ಇದರ ಅಧ್ಯಕ್ಷೆ ಲೂಸಿ ಕಾರ್ಲೊ , ಮಡಂತ್ಯಾರು ವಲಯ ಸಮಿತಿ ಪದಾಧಿಕಾರಿಗಳು ತರಬೇತುದಾರರಾದ ಸುಮನಾ ಉಪಸ್ಥಿತರಿದ್ದರು .

ಸುಮಲತಾ ಕಾರ್ಯಕ್ರಮ ನಿರೂಪಣೆ ಮಾಡಿದರು ಒಟ್ಟು 28 ಮಹಿಳೆಯರು 10 ದಿವಸದ ತರಬೇತಿಯನ್ನು ಪಡೆಯಲಿದ್ದಾರೆ .

Related posts

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ನಾಳೆ(ಜೂ.25): ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!