38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಜ.10 ರಂದು ಭೇಟಿ ನೀಡಿದರು.

ಶಾಸಕಿ ನಯನ ಮೋಟಮ್ಮರಿಂದ ಈ ಹಿಂದೆ ಪ್ರಾರ್ಥಿಸಿ ಹೋದಂತೆ ಗಣಪತಿ ದೇವರಿಗೆ ರಂಗ ಪೂಜೆ ಸೇವೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯರು ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಸದಸ್ಯರಾದ ಪ್ರಶಾಂತ ಪೂವಾಜೆ, ವಿಠ್ಠಲ ಕುರ್ಲೆ, ಶ್ರೀ ಪುರಂದರ ಕಡೀರ, ಶ್ರೀಮತಿ ಯಶೋಧ ಉಮೇಶ ಶಬರಾಡಿ, ಅರ್ಚಕರಾದ ಶ್ರೀ ಸುಬ್ರಮಣ್ಯ ತೋಡ್ತಿಲ್ಲಾಯರು, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ಅಪಾರ ಸಂಖ್ಯೆ ಭಕ್ತಾದಿಗಳು ಉಪಸ್ಥಿತರಿದ್ದರು.

ಇವರನ್ನು ಕ್ಷೇತ್ರದ ಸಂಪ್ರದಾಯದಂತೆ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

Related posts

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!