25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

ಉಜಿರೆ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಕಳೆದ ಅಕ್ಟೋಬರ್ ನಲ್ಲಿ  5 ದಿನಗಳ ಕಾಲ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವವು ಎಲ್ಲರ ಪಾಲ್ಗೊಳ್ಳುವಿಕೆ ಹಾಗು ಸಹಕಾರದಿಂದ ಯಶಸ್ವಿಯಾಗಿ ,ಮಾದರಿ ಕಾರ್ಯಕ್ರಮವಾಗಿ ನಡೆದಿದ್ದು ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಹೃತ್ಪೂರ್ವಕ ಕೃ ತಜ್ಞತೆಗಳು  ಹಾಗೂ ಮುಂದೆಯೂ ಎಲ್ಲರ ಸಹಕಾರದಿಂದ ಶ್ರೀ ಶಾರದಾ ಪೂಜೋತ್ಸವ  ನಿರಂತರವಾಗಿ ನಡೆಯಲಿ ಎಂದು  ಸಮಿತಿ ಗೌರವಾಧ್ಯಕ್ಷ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹೇಳಿದ್ದಾರೆ.                                                                   

ಅವರು ಜ 9ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ  ಅವಲೋಕನ ಹಾಗು ಕೃತಜ್ಞತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ಮಾಧವ ಹೊಳ್ಳ, ಉಪಾಧ್ಯಕ್ಷರಾದ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ವನಿತಾ ವಿಶ್ವನಾಥ ಶೆಟ್ಟಿ ,ಕಾರ್ಯದರ್ಶಿ ಅಜೇಯ ಶೆಟ್ಟಿ  ಉಪಸ್ಥಿತರಿದ್ದರು. ಕೋಶಾಧಿಕಾರಿ ಶಿವಪ್ರಸಾದ್ ಸುರ್ಯ ಸಮಾರಂಭದ ಲೆಕ್ಕ ಪತ್ರ ಮಂಡಿಸಿ , ಅನುಮೋದಿಸಲಾಯಿತು.                                                                     

ಮುಂದಿನ 44 ನೇ ವರ್ಷದ ಶ್ರೀ ಶಾರದಾ ಪೂಜಾ  ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿ ಅಧ್ಯಕ್ಷರಾಗಿ ಎನ್..ಮಾಧವ ಹೊಳ್ಳ, ಉಪಾಧ್ಯಕ್ಷರಾಗಿ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ಪ್ರಕಾಶ್ ಗೌಡ ಇಜ್ಜಲ, ವನಿತಾ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿಯಾಗಿ ಅಜೇಯ ಶೆಟ್ಟಿ,ಕೋಶಾಧಿಕಾರಿಯಾಗಿ ಶಿವಪ್ರಸಾದ್ ಸುರ್ಯ, ಜತೆ ಕಾರ್ಯದರ್ಶಿಯಾಗಿ ಕಿರಣ್ ರಾಜ್ ಅತ್ತಾಜೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ಕೃಷ್ಣ ಜಿ.ಕೆ.  ಅವರನ್ನು ಸರ್ವಾನುಮತ ದಿಂದ ಆಯ್ಕೆ ಮಾಡಲಾಯಿತು.  

Related posts

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya
error: Content is protected !!