32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

ಉಜಿರೆ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಕಳೆದ ಅಕ್ಟೋಬರ್ ನಲ್ಲಿ  5 ದಿನಗಳ ಕಾಲ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವವು ಎಲ್ಲರ ಪಾಲ್ಗೊಳ್ಳುವಿಕೆ ಹಾಗು ಸಹಕಾರದಿಂದ ಯಶಸ್ವಿಯಾಗಿ ,ಮಾದರಿ ಕಾರ್ಯಕ್ರಮವಾಗಿ ನಡೆದಿದ್ದು ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಹೃತ್ಪೂರ್ವಕ ಕೃ ತಜ್ಞತೆಗಳು  ಹಾಗೂ ಮುಂದೆಯೂ ಎಲ್ಲರ ಸಹಕಾರದಿಂದ ಶ್ರೀ ಶಾರದಾ ಪೂಜೋತ್ಸವ  ನಿರಂತರವಾಗಿ ನಡೆಯಲಿ ಎಂದು  ಸಮಿತಿ ಗೌರವಾಧ್ಯಕ್ಷ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹೇಳಿದ್ದಾರೆ.                                                                   

ಅವರು ಜ 9ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ  ಅವಲೋಕನ ಹಾಗು ಕೃತಜ್ಞತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ಮಾಧವ ಹೊಳ್ಳ, ಉಪಾಧ್ಯಕ್ಷರಾದ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ವನಿತಾ ವಿಶ್ವನಾಥ ಶೆಟ್ಟಿ ,ಕಾರ್ಯದರ್ಶಿ ಅಜೇಯ ಶೆಟ್ಟಿ  ಉಪಸ್ಥಿತರಿದ್ದರು. ಕೋಶಾಧಿಕಾರಿ ಶಿವಪ್ರಸಾದ್ ಸುರ್ಯ ಸಮಾರಂಭದ ಲೆಕ್ಕ ಪತ್ರ ಮಂಡಿಸಿ , ಅನುಮೋದಿಸಲಾಯಿತು.                                                                     

ಮುಂದಿನ 44 ನೇ ವರ್ಷದ ಶ್ರೀ ಶಾರದಾ ಪೂಜಾ  ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿ ಅಧ್ಯಕ್ಷರಾಗಿ ಎನ್..ಮಾಧವ ಹೊಳ್ಳ, ಉಪಾಧ್ಯಕ್ಷರಾಗಿ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ಪ್ರಕಾಶ್ ಗೌಡ ಇಜ್ಜಲ, ವನಿತಾ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿಯಾಗಿ ಅಜೇಯ ಶೆಟ್ಟಿ,ಕೋಶಾಧಿಕಾರಿಯಾಗಿ ಶಿವಪ್ರಸಾದ್ ಸುರ್ಯ, ಜತೆ ಕಾರ್ಯದರ್ಶಿಯಾಗಿ ಕಿರಣ್ ರಾಜ್ ಅತ್ತಾಜೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ಕೃಷ್ಣ ಜಿ.ಕೆ.  ಅವರನ್ನು ಸರ್ವಾನುಮತ ದಿಂದ ಆಯ್ಕೆ ಮಾಡಲಾಯಿತು.  

Related posts

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya
error: Content is protected !!