22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

ಉಜಿರೆ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಕಳೆದ ಅಕ್ಟೋಬರ್ ನಲ್ಲಿ  5 ದಿನಗಳ ಕಾಲ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವವು ಎಲ್ಲರ ಪಾಲ್ಗೊಳ್ಳುವಿಕೆ ಹಾಗು ಸಹಕಾರದಿಂದ ಯಶಸ್ವಿಯಾಗಿ ,ಮಾದರಿ ಕಾರ್ಯಕ್ರಮವಾಗಿ ನಡೆದಿದ್ದು ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಹೃತ್ಪೂರ್ವಕ ಕೃ ತಜ್ಞತೆಗಳು  ಹಾಗೂ ಮುಂದೆಯೂ ಎಲ್ಲರ ಸಹಕಾರದಿಂದ ಶ್ರೀ ಶಾರದಾ ಪೂಜೋತ್ಸವ  ನಿರಂತರವಾಗಿ ನಡೆಯಲಿ ಎಂದು  ಸಮಿತಿ ಗೌರವಾಧ್ಯಕ್ಷ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹೇಳಿದ್ದಾರೆ.                                                                   

ಅವರು ಜ 9ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ  ಅವಲೋಕನ ಹಾಗು ಕೃತಜ್ಞತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ಮಾಧವ ಹೊಳ್ಳ, ಉಪಾಧ್ಯಕ್ಷರಾದ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ವನಿತಾ ವಿಶ್ವನಾಥ ಶೆಟ್ಟಿ ,ಕಾರ್ಯದರ್ಶಿ ಅಜೇಯ ಶೆಟ್ಟಿ  ಉಪಸ್ಥಿತರಿದ್ದರು. ಕೋಶಾಧಿಕಾರಿ ಶಿವಪ್ರಸಾದ್ ಸುರ್ಯ ಸಮಾರಂಭದ ಲೆಕ್ಕ ಪತ್ರ ಮಂಡಿಸಿ , ಅನುಮೋದಿಸಲಾಯಿತು.                                                                     

ಮುಂದಿನ 44 ನೇ ವರ್ಷದ ಶ್ರೀ ಶಾರದಾ ಪೂಜಾ  ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿ ಅಧ್ಯಕ್ಷರಾಗಿ ಎನ್..ಮಾಧವ ಹೊಳ್ಳ, ಉಪಾಧ್ಯಕ್ಷರಾಗಿ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ಪ್ರಕಾಶ್ ಗೌಡ ಇಜ್ಜಲ, ವನಿತಾ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿಯಾಗಿ ಅಜೇಯ ಶೆಟ್ಟಿ,ಕೋಶಾಧಿಕಾರಿಯಾಗಿ ಶಿವಪ್ರಸಾದ್ ಸುರ್ಯ, ಜತೆ ಕಾರ್ಯದರ್ಶಿಯಾಗಿ ಕಿರಣ್ ರಾಜ್ ಅತ್ತಾಜೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ಕೃಷ್ಣ ಜಿ.ಕೆ.  ಅವರನ್ನು ಸರ್ವಾನುಮತ ದಿಂದ ಆಯ್ಕೆ ಮಾಡಲಾಯಿತು.  

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya
error: Content is protected !!