25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

ಉಜಿರೆ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಕಳೆದ ಅಕ್ಟೋಬರ್ ನಲ್ಲಿ  5 ದಿನಗಳ ಕಾಲ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವವು ಎಲ್ಲರ ಪಾಲ್ಗೊಳ್ಳುವಿಕೆ ಹಾಗು ಸಹಕಾರದಿಂದ ಯಶಸ್ವಿಯಾಗಿ ,ಮಾದರಿ ಕಾರ್ಯಕ್ರಮವಾಗಿ ನಡೆದಿದ್ದು ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಹೃತ್ಪೂರ್ವಕ ಕೃ ತಜ್ಞತೆಗಳು  ಹಾಗೂ ಮುಂದೆಯೂ ಎಲ್ಲರ ಸಹಕಾರದಿಂದ ಶ್ರೀ ಶಾರದಾ ಪೂಜೋತ್ಸವ  ನಿರಂತರವಾಗಿ ನಡೆಯಲಿ ಎಂದು  ಸಮಿತಿ ಗೌರವಾಧ್ಯಕ್ಷ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹೇಳಿದ್ದಾರೆ.                                                                   

ಅವರು ಜ 9ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ  ಅವಲೋಕನ ಹಾಗು ಕೃತಜ್ಞತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ಮಾಧವ ಹೊಳ್ಳ, ಉಪಾಧ್ಯಕ್ಷರಾದ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ವನಿತಾ ವಿಶ್ವನಾಥ ಶೆಟ್ಟಿ ,ಕಾರ್ಯದರ್ಶಿ ಅಜೇಯ ಶೆಟ್ಟಿ  ಉಪಸ್ಥಿತರಿದ್ದರು. ಕೋಶಾಧಿಕಾರಿ ಶಿವಪ್ರಸಾದ್ ಸುರ್ಯ ಸಮಾರಂಭದ ಲೆಕ್ಕ ಪತ್ರ ಮಂಡಿಸಿ , ಅನುಮೋದಿಸಲಾಯಿತು.                                                                     

ಮುಂದಿನ 44 ನೇ ವರ್ಷದ ಶ್ರೀ ಶಾರದಾ ಪೂಜಾ  ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿ ಅಧ್ಯಕ್ಷರಾಗಿ ಎನ್..ಮಾಧವ ಹೊಳ್ಳ, ಉಪಾಧ್ಯಕ್ಷರಾಗಿ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ಪ್ರಕಾಶ್ ಗೌಡ ಇಜ್ಜಲ, ವನಿತಾ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿಯಾಗಿ ಅಜೇಯ ಶೆಟ್ಟಿ,ಕೋಶಾಧಿಕಾರಿಯಾಗಿ ಶಿವಪ್ರಸಾದ್ ಸುರ್ಯ, ಜತೆ ಕಾರ್ಯದರ್ಶಿಯಾಗಿ ಕಿರಣ್ ರಾಜ್ ಅತ್ತಾಜೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ಕೃಷ್ಣ ಜಿ.ಕೆ.  ಅವರನ್ನು ಸರ್ವಾನುಮತ ದಿಂದ ಆಯ್ಕೆ ಮಾಡಲಾಯಿತು.  

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya
error: Content is protected !!