23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

ಉಜಿರೆ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಕಳೆದ ಅಕ್ಟೋಬರ್ ನಲ್ಲಿ  5 ದಿನಗಳ ಕಾಲ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವವು ಎಲ್ಲರ ಪಾಲ್ಗೊಳ್ಳುವಿಕೆ ಹಾಗು ಸಹಕಾರದಿಂದ ಯಶಸ್ವಿಯಾಗಿ ,ಮಾದರಿ ಕಾರ್ಯಕ್ರಮವಾಗಿ ನಡೆದಿದ್ದು ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಹೃತ್ಪೂರ್ವಕ ಕೃ ತಜ್ಞತೆಗಳು  ಹಾಗೂ ಮುಂದೆಯೂ ಎಲ್ಲರ ಸಹಕಾರದಿಂದ ಶ್ರೀ ಶಾರದಾ ಪೂಜೋತ್ಸವ  ನಿರಂತರವಾಗಿ ನಡೆಯಲಿ ಎಂದು  ಸಮಿತಿ ಗೌರವಾಧ್ಯಕ್ಷ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹೇಳಿದ್ದಾರೆ.                                                                   

ಅವರು ಜ 9ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ  ಅವಲೋಕನ ಹಾಗು ಕೃತಜ್ಞತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ಮಾಧವ ಹೊಳ್ಳ, ಉಪಾಧ್ಯಕ್ಷರಾದ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ವನಿತಾ ವಿಶ್ವನಾಥ ಶೆಟ್ಟಿ ,ಕಾರ್ಯದರ್ಶಿ ಅಜೇಯ ಶೆಟ್ಟಿ  ಉಪಸ್ಥಿತರಿದ್ದರು. ಕೋಶಾಧಿಕಾರಿ ಶಿವಪ್ರಸಾದ್ ಸುರ್ಯ ಸಮಾರಂಭದ ಲೆಕ್ಕ ಪತ್ರ ಮಂಡಿಸಿ , ಅನುಮೋದಿಸಲಾಯಿತು.                                                                     

ಮುಂದಿನ 44 ನೇ ವರ್ಷದ ಶ್ರೀ ಶಾರದಾ ಪೂಜಾ  ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿ ಅಧ್ಯಕ್ಷರಾಗಿ ಎನ್..ಮಾಧವ ಹೊಳ್ಳ, ಉಪಾಧ್ಯಕ್ಷರಾಗಿ ಹುಕುಂ ರಾಮ್ ಪಟೇಲ್, ಲಕ್ಷ್ಮಣ ಸಪಲ್ಯ, ಪ್ರಕಾಶ್ ಗೌಡ ಇಜ್ಜಲ, ವನಿತಾ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿಯಾಗಿ ಅಜೇಯ ಶೆಟ್ಟಿ,ಕೋಶಾಧಿಕಾರಿಯಾಗಿ ಶಿವಪ್ರಸಾದ್ ಸುರ್ಯ, ಜತೆ ಕಾರ್ಯದರ್ಶಿಯಾಗಿ ಕಿರಣ್ ರಾಜ್ ಅತ್ತಾಜೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ಕೃಷ್ಣ ಜಿ.ಕೆ.  ಅವರನ್ನು ಸರ್ವಾನುಮತ ದಿಂದ ಆಯ್ಕೆ ಮಾಡಲಾಯಿತು.  

Related posts

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!