April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

ಮೊಗ್ರು :ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಮುಗೇರಡ್ಕ ಮೊಗ್ರು ಗ್ರಾಮ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ನಾಳೆ ಜ. 13 ರಂದು ಶ್ರೀ ಕ್ಷೇತ್ರ ಮುಗೇರಡ್ಕ ವಠಾರದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ.

ಬೆಳಗ್ಗೆ 6.30 ಕ್ಕೆ ಗಣಹೋಮ, ಬೆಳಗ್ಗಿನಿಂದ ಸಂಜೆಯವರೆಗೆ ಸ್ಥಳೀಯ 10 ಭಜನಾ ಮಂಡಳಿಗಳಿಂದ ಅರ್ಧಏಕಾಹ ಭಜನೆ, ಸಂಜೆ 5.00 ರಿಂದ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನೊರಂಜನಾ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.00 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ.

ಸಭಾಧ್ಯಕ್ಷರಾಗಿ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದ ಆಡಳಿತ ಮೋಕ್ತೆಶರರಾದ ರಾಮಣ್ಣ ಗೌಡ ದೇವಸ್ಯ ಗುತ್ತು, ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ದ ಶಾಸಕರಾದ ಹರೀಶ್ ಪೂಂಜ, ಸಾಮಾಜಿಕ ಹೋರಾಟಗಾರರದ ದಿನೇಶ್ ಕುಮಾರ್ ಜೈನ್ ಪುತ್ತೂರು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ,ಮಂಗಳೂರು ಆವಿಷ್ಕಾರ ಯೋಗ, ಯೋಗ ಚಿಕಿತ್ಸಕರರಾದ ಕುಶಾಲಪ್ಪ ಗೌಡ ನೆಕ್ಕರಾಜೆ ಇವರ ಉಪಸ್ಥಿಯಲ್ಲಿ ನೆರವೇರಲಿದೆ.

ರಾತ್ರಿ 10 ರಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಮುರಳಿ ಬ್ರದರ್ಸ್ ಡ್ಯಾನ್ಸ್ ಕ್ರಿವ್ ಪುತ್ತೂರು ಇವರಿಂದ ನೃತ್ಯ ವೈಭವ ನಡೆಯಲಿದೆ.ಈ ಎಲ್ಲಾ ಕಾರ್ಯಕ್ರಮಗಳಿಗೆ ಭಜನಾ ಮಂಡಳಿ ಆಡಳಿತ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದ ಆಡಳಿತ ಮೋಕ್ತೆಶರರಾದ ರಾಮಣ್ಣ ಗೌಡ ದೇವಸ್ಯಗುತ್ತು, ಮನೋಹರ ಗೌಡ ಅಂತರ ಗುತ್ತು, ಭಜನಾ ಮಂದಿರ ಆಡಳಿತ ಸಮಿತಿ ಕಾರ್ಯದರ್ಶಿ ಪುರಂದರ ಗೌಡ ನೈಮಾರ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!