23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

ಬೆಳ್ತಂಗಡಿ: 2017 ರಲ್ಲಿ ಆರಂಭಗೊಂಡು ಹಲವಾರು ಸೇವಾ ಚಟುವಟಿಕೆಗಳ ಮೂಲಕ ಯಶಸ್ವಿಯಾಗಿ ಮುನ್ನಡೆಯುತ್ತಿರುವ ‘ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್’ ಸಂಘಟನೆ ಇದರ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವಿರೋಧವಾಗಿ ಪುನರಾಯ್ಕೆಗೊಂಡಿರುತ್ತಾರೆ.

ಉಪಾಧ್ಯಕ್ಷರಾಗಿ ಹಬೀಬ್ ಸಿ, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಮುಸ್ಲಿಯಾರ್ ನೆರಿಯ, ಜತೆ ಕಾರ್ಯದರ್ಶಿಯಾಗಿ ಮನ್ಸೂರ್ ದರ್ಖಾಸ್ ಮತ್ತು ಕೋಶಾಧಿಕಾರಿಯಾಗಿ ಅಬೂಬಕ್ಕರ್ ಪಂಪು ಇವರು ಆಯ್ಕೆಯಾದರು.
ಉಳಿದಂತೆ 8 ಮಂದಿಯನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಗಿದ್ದು, ನಾಸಿರ್ ಕಲ್ಲಗುಡ್ಡೆ, ರಶೀದ್ ಕಲ್ಲಗುಡ್ಡೆ, ರಫೀಕ್ ಮದನಿ, ಸಲೀಂ ಗಾಂಧಿನಗರ, ಝಕರಿಯಾ ದರ್ಖಾಸ್, ಸ್ವದಕತುಲ್ಲಾ ದಾರಿಮಿ, ಕೆರೀಂ ಬೆಳಾಲು ಮತ್ತು ಯಹ್ಯಾ ಗಾಂಧಿನಗರ ಇವರು ಸ್ಥಾನ‌ ಪಡೆದುಕೊಂಡರು.
ಸಂಘಟನೆಯ 6 ನೇ ಮಹಾಸಭೆಯು ಕಕ್ಕಿಂಜೆ ದರ್ಖಾಸ್ ನಲ್ಲಿ ನಡೆಯಿತು. ಸೂರಲ್ಪಾಡಿ ಮಸ್ಜಿದ್ ಪ್ರಧಾನ ಧರ್ಮಗುರು ಮುರ್ಷಿದ್ ಫೈಝಿ ಉಪನ್ಯಾಸ ನಡೆಸಿಕೊಟ್ಟರು. ನಾಸಿರ್ ಕಲ್ಲಗುಡ್ಡೆ, ರಫೀಕ್ ಮದನಿ ಕಾರ್ಯಕ್ರಮ‌ ನಿರೂಪಿಸಿದರು. ಹಬೀಬ್ ಸಿ ವರದಿ ಮತ್ತು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಗೌರವ ಸಲಹೆಗಾರ ಅಬ್ದುಲ್ಲ ಗಾಂಧಿನಗರ, ಅಬ್ದುಲ್ ರಹಿಮಾನ್ ಮಂತ್ರಬೈಲು, ಸಿ ಮುಹಮ್ಮದ್, ಮೋಣುಚ್ಚ ಕಲ್ಲಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya
error: Content is protected !!