23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

ಬೆಳ್ತಂಗಡಿ: 2017 ರಲ್ಲಿ ಆರಂಭಗೊಂಡು ಹಲವಾರು ಸೇವಾ ಚಟುವಟಿಕೆಗಳ ಮೂಲಕ ಯಶಸ್ವಿಯಾಗಿ ಮುನ್ನಡೆಯುತ್ತಿರುವ ‘ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್’ ಸಂಘಟನೆ ಇದರ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವಿರೋಧವಾಗಿ ಪುನರಾಯ್ಕೆಗೊಂಡಿರುತ್ತಾರೆ.

ಉಪಾಧ್ಯಕ್ಷರಾಗಿ ಹಬೀಬ್ ಸಿ, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಮುಸ್ಲಿಯಾರ್ ನೆರಿಯ, ಜತೆ ಕಾರ್ಯದರ್ಶಿಯಾಗಿ ಮನ್ಸೂರ್ ದರ್ಖಾಸ್ ಮತ್ತು ಕೋಶಾಧಿಕಾರಿಯಾಗಿ ಅಬೂಬಕ್ಕರ್ ಪಂಪು ಇವರು ಆಯ್ಕೆಯಾದರು.
ಉಳಿದಂತೆ 8 ಮಂದಿಯನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಗಿದ್ದು, ನಾಸಿರ್ ಕಲ್ಲಗುಡ್ಡೆ, ರಶೀದ್ ಕಲ್ಲಗುಡ್ಡೆ, ರಫೀಕ್ ಮದನಿ, ಸಲೀಂ ಗಾಂಧಿನಗರ, ಝಕರಿಯಾ ದರ್ಖಾಸ್, ಸ್ವದಕತುಲ್ಲಾ ದಾರಿಮಿ, ಕೆರೀಂ ಬೆಳಾಲು ಮತ್ತು ಯಹ್ಯಾ ಗಾಂಧಿನಗರ ಇವರು ಸ್ಥಾನ‌ ಪಡೆದುಕೊಂಡರು.
ಸಂಘಟನೆಯ 6 ನೇ ಮಹಾಸಭೆಯು ಕಕ್ಕಿಂಜೆ ದರ್ಖಾಸ್ ನಲ್ಲಿ ನಡೆಯಿತು. ಸೂರಲ್ಪಾಡಿ ಮಸ್ಜಿದ್ ಪ್ರಧಾನ ಧರ್ಮಗುರು ಮುರ್ಷಿದ್ ಫೈಝಿ ಉಪನ್ಯಾಸ ನಡೆಸಿಕೊಟ್ಟರು. ನಾಸಿರ್ ಕಲ್ಲಗುಡ್ಡೆ, ರಫೀಕ್ ಮದನಿ ಕಾರ್ಯಕ್ರಮ‌ ನಿರೂಪಿಸಿದರು. ಹಬೀಬ್ ಸಿ ವರದಿ ಮತ್ತು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಗೌರವ ಸಲಹೆಗಾರ ಅಬ್ದುಲ್ಲ ಗಾಂಧಿನಗರ, ಅಬ್ದುಲ್ ರಹಿಮಾನ್ ಮಂತ್ರಬೈಲು, ಸಿ ಮುಹಮ್ಮದ್, ಮೋಣುಚ್ಚ ಕಲ್ಲಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya
error: Content is protected !!