23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

ಬೆಳ್ತಂಗಡಿ: 2017 ರಲ್ಲಿ ಆರಂಭಗೊಂಡು ಹಲವಾರು ಸೇವಾ ಚಟುವಟಿಕೆಗಳ ಮೂಲಕ ಯಶಸ್ವಿಯಾಗಿ ಮುನ್ನಡೆಯುತ್ತಿರುವ ‘ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್’ ಸಂಘಟನೆ ಇದರ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವಿರೋಧವಾಗಿ ಪುನರಾಯ್ಕೆಗೊಂಡಿರುತ್ತಾರೆ.

ಉಪಾಧ್ಯಕ್ಷರಾಗಿ ಹಬೀಬ್ ಸಿ, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಮುಸ್ಲಿಯಾರ್ ನೆರಿಯ, ಜತೆ ಕಾರ್ಯದರ್ಶಿಯಾಗಿ ಮನ್ಸೂರ್ ದರ್ಖಾಸ್ ಮತ್ತು ಕೋಶಾಧಿಕಾರಿಯಾಗಿ ಅಬೂಬಕ್ಕರ್ ಪಂಪು ಇವರು ಆಯ್ಕೆಯಾದರು.
ಉಳಿದಂತೆ 8 ಮಂದಿಯನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಗಿದ್ದು, ನಾಸಿರ್ ಕಲ್ಲಗುಡ್ಡೆ, ರಶೀದ್ ಕಲ್ಲಗುಡ್ಡೆ, ರಫೀಕ್ ಮದನಿ, ಸಲೀಂ ಗಾಂಧಿನಗರ, ಝಕರಿಯಾ ದರ್ಖಾಸ್, ಸ್ವದಕತುಲ್ಲಾ ದಾರಿಮಿ, ಕೆರೀಂ ಬೆಳಾಲು ಮತ್ತು ಯಹ್ಯಾ ಗಾಂಧಿನಗರ ಇವರು ಸ್ಥಾನ‌ ಪಡೆದುಕೊಂಡರು.
ಸಂಘಟನೆಯ 6 ನೇ ಮಹಾಸಭೆಯು ಕಕ್ಕಿಂಜೆ ದರ್ಖಾಸ್ ನಲ್ಲಿ ನಡೆಯಿತು. ಸೂರಲ್ಪಾಡಿ ಮಸ್ಜಿದ್ ಪ್ರಧಾನ ಧರ್ಮಗುರು ಮುರ್ಷಿದ್ ಫೈಝಿ ಉಪನ್ಯಾಸ ನಡೆಸಿಕೊಟ್ಟರು. ನಾಸಿರ್ ಕಲ್ಲಗುಡ್ಡೆ, ರಫೀಕ್ ಮದನಿ ಕಾರ್ಯಕ್ರಮ‌ ನಿರೂಪಿಸಿದರು. ಹಬೀಬ್ ಸಿ ವರದಿ ಮತ್ತು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಗೌರವ ಸಲಹೆಗಾರ ಅಬ್ದುಲ್ಲ ಗಾಂಧಿನಗರ, ಅಬ್ದುಲ್ ರಹಿಮಾನ್ ಮಂತ್ರಬೈಲು, ಸಿ ಮುಹಮ್ಮದ್, ಮೋಣುಚ್ಚ ಕಲ್ಲಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.

Related posts

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
error: Content is protected !!