23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಅಳದಂಗಡಿ: ಇಲ್ಲಿಯ ಗೋಳಿಯಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದ್ದು, ಜ.11ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಟ್ಟಡೆ ಗ್ರಾಮದ ಫೆಲಿಕ್ಸ್‌ ಅರುಣ್‌ ಪಾಯಸ್‌ (45ವ) ಎಂಬವರ ದೂರಿನಂತೆ, ಜ.02 ರಂದು ರಾತ್ರಿ ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪಾಲ್ದ್ರೋಡಿ ಎಂಬಲ್ಲಿ, ಗೊಳಿಯಂಗಡಿ ಅಳದಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ನಂಬ್ರ: ಕೆಎ 70.6638 ನೇದನ್ನು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ, ಫೆಲಿಕ್ಸ್‌ ಅರುಣ್‌ ಪಾಯಸ್‌ ಬಾಬ್ತು ಬೈಕ್‌ ನಂಬ್ರ: ಕೆಎ 21.ಹೆಚ್‌.7801 ನೇ ದಕ್ಕೆ ರಭಸದಿಂದ ಡಿಕ್ಕಿ ಹೊಡೆದು ಆಟೋ ರಿಕ್ಷಾಯೊಂದಿಗೆ ಪರಾರಿಯಾಗಿರುತ್ತಾನೆ. ಅಪಘಾತದ ಪರಿಣಾಮ ಬೈಕ್‌ ಸವಾರ ರಸ್ತೆಗೆ ಬಿದ್ದು ರಕ್ತಗಾಯವಾಗಿದ್ದು, ಉಜಿರೆ ಎಸ್‌ಡಿಎಂ ಆಸ್ಪತ್ರೆ ಚಿಕಿತ್ಸೆ ಪಡೆದಿರುತ್ತಾರೆ ಎಂಬುದಾಗಿ ಜ. 11 ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 03/2024 ಕಲಂ: 279,337 IPC & 134(A)(B) IMV Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya
error: Content is protected !!