25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಅಳದಂಗಡಿ: ಇಲ್ಲಿಯ ಗೋಳಿಯಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದ್ದು, ಜ.11ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಟ್ಟಡೆ ಗ್ರಾಮದ ಫೆಲಿಕ್ಸ್‌ ಅರುಣ್‌ ಪಾಯಸ್‌ (45ವ) ಎಂಬವರ ದೂರಿನಂತೆ, ಜ.02 ರಂದು ರಾತ್ರಿ ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪಾಲ್ದ್ರೋಡಿ ಎಂಬಲ್ಲಿ, ಗೊಳಿಯಂಗಡಿ ಅಳದಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ನಂಬ್ರ: ಕೆಎ 70.6638 ನೇದನ್ನು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ, ಫೆಲಿಕ್ಸ್‌ ಅರುಣ್‌ ಪಾಯಸ್‌ ಬಾಬ್ತು ಬೈಕ್‌ ನಂಬ್ರ: ಕೆಎ 21.ಹೆಚ್‌.7801 ನೇ ದಕ್ಕೆ ರಭಸದಿಂದ ಡಿಕ್ಕಿ ಹೊಡೆದು ಆಟೋ ರಿಕ್ಷಾಯೊಂದಿಗೆ ಪರಾರಿಯಾಗಿರುತ್ತಾನೆ. ಅಪಘಾತದ ಪರಿಣಾಮ ಬೈಕ್‌ ಸವಾರ ರಸ್ತೆಗೆ ಬಿದ್ದು ರಕ್ತಗಾಯವಾಗಿದ್ದು, ಉಜಿರೆ ಎಸ್‌ಡಿಎಂ ಆಸ್ಪತ್ರೆ ಚಿಕಿತ್ಸೆ ಪಡೆದಿರುತ್ತಾರೆ ಎಂಬುದಾಗಿ ಜ. 11 ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 03/2024 ಕಲಂ: 279,337 IPC & 134(A)(B) IMV Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!