24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಅಳದಂಗಡಿ: ಇಲ್ಲಿಯ ಗೋಳಿಯಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದ್ದು, ಜ.11ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಟ್ಟಡೆ ಗ್ರಾಮದ ಫೆಲಿಕ್ಸ್‌ ಅರುಣ್‌ ಪಾಯಸ್‌ (45ವ) ಎಂಬವರ ದೂರಿನಂತೆ, ಜ.02 ರಂದು ರಾತ್ರಿ ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪಾಲ್ದ್ರೋಡಿ ಎಂಬಲ್ಲಿ, ಗೊಳಿಯಂಗಡಿ ಅಳದಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ನಂಬ್ರ: ಕೆಎ 70.6638 ನೇದನ್ನು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ, ಫೆಲಿಕ್ಸ್‌ ಅರುಣ್‌ ಪಾಯಸ್‌ ಬಾಬ್ತು ಬೈಕ್‌ ನಂಬ್ರ: ಕೆಎ 21.ಹೆಚ್‌.7801 ನೇ ದಕ್ಕೆ ರಭಸದಿಂದ ಡಿಕ್ಕಿ ಹೊಡೆದು ಆಟೋ ರಿಕ್ಷಾಯೊಂದಿಗೆ ಪರಾರಿಯಾಗಿರುತ್ತಾನೆ. ಅಪಘಾತದ ಪರಿಣಾಮ ಬೈಕ್‌ ಸವಾರ ರಸ್ತೆಗೆ ಬಿದ್ದು ರಕ್ತಗಾಯವಾಗಿದ್ದು, ಉಜಿರೆ ಎಸ್‌ಡಿಎಂ ಆಸ್ಪತ್ರೆ ಚಿಕಿತ್ಸೆ ಪಡೆದಿರುತ್ತಾರೆ ಎಂಬುದಾಗಿ ಜ. 11 ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 03/2024 ಕಲಂ: 279,337 IPC & 134(A)(B) IMV Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya
error: Content is protected !!