September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಅಳದಂಗಡಿ: ಇಲ್ಲಿಯ ಗೋಳಿಯಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದ್ದು, ಜ.11ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಟ್ಟಡೆ ಗ್ರಾಮದ ಫೆಲಿಕ್ಸ್‌ ಅರುಣ್‌ ಪಾಯಸ್‌ (45ವ) ಎಂಬವರ ದೂರಿನಂತೆ, ಜ.02 ರಂದು ರಾತ್ರಿ ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪಾಲ್ದ್ರೋಡಿ ಎಂಬಲ್ಲಿ, ಗೊಳಿಯಂಗಡಿ ಅಳದಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ನಂಬ್ರ: ಕೆಎ 70.6638 ನೇದನ್ನು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ, ಫೆಲಿಕ್ಸ್‌ ಅರುಣ್‌ ಪಾಯಸ್‌ ಬಾಬ್ತು ಬೈಕ್‌ ನಂಬ್ರ: ಕೆಎ 21.ಹೆಚ್‌.7801 ನೇ ದಕ್ಕೆ ರಭಸದಿಂದ ಡಿಕ್ಕಿ ಹೊಡೆದು ಆಟೋ ರಿಕ್ಷಾಯೊಂದಿಗೆ ಪರಾರಿಯಾಗಿರುತ್ತಾನೆ. ಅಪಘಾತದ ಪರಿಣಾಮ ಬೈಕ್‌ ಸವಾರ ರಸ್ತೆಗೆ ಬಿದ್ದು ರಕ್ತಗಾಯವಾಗಿದ್ದು, ಉಜಿರೆ ಎಸ್‌ಡಿಎಂ ಆಸ್ಪತ್ರೆ ಚಿಕಿತ್ಸೆ ಪಡೆದಿರುತ್ತಾರೆ ಎಂಬುದಾಗಿ ಜ. 11 ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 03/2024 ಕಲಂ: 279,337 IPC & 134(A)(B) IMV Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ನಾರಾವಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

Suddi Udaya
error: Content is protected !!