ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ನಾರಾವಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಭೆಯ ನೋಡಲ್ ಅಧಿಕಾರಿಯವರ ಅನುಪಸ್ಥಿತಿಯಲ್ಲಿ ಊರಿನ ಗಣ್ಯ ವ್ಯಕ್ತಿಯಾದ ಶ್ಯಾಮ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಯಿತು. ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ , ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ ಹಾಗೂ ಗ್ರಾ.ಪಂ ಸದಸ್ಯರಾದ ಆಶಾಲತಾ, ನಾರಾಯಣ , ಸುದರ್ಶನ್, ಸಂತೋಷ್, ಡಯಾನ ಪ್ರಮೀಳಾ ರೋಡ್ರಿಗಸ್, ಮಲ್ಲಿಕಾ,ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಧಾಕರ್, ಕಾರ್ಯದರ್ಶಿ ಶ್ರೀಮತಿ ಯೋಗಿಣಿ ಶೆಟ್ಟಿ , , ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿ, ತಾಂತ್ರಿಕ ಸಂಯೋಜಕರು ಶ್ರೀಮತಿ ಪೂರ್ಣಿಮಾ, ಗ್ರಾ.ಪಂ ಸಿಬ್ಬಂದಿಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!