22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ: 2 ವರ್ಷದ ಮಗು ತನ್ನ ಕಾಲಿನ ಬಲ ಭಾಗದ ಪಾದ ವಕ್ರವಾಗಿರುವುದರಿಂದ ಸರಿಯಾಗಿ ನಡೆದಾಡಲು ಕಷ್ಟ ಪಡುತ್ತಿದ್ದು, ಚಿಕಿತ್ಸೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬಂದಾಗ ಇಲ್ಲಿನ ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ ಪ್ರತೀಕ್ಷ್. ಬಿ ಮಗುವನ್ನು ಪರೀಕ್ಷಿಸಿ ವಕ್ರ ಪಾದದ ಶಸ್ತ್ರಚಿಕಿತ್ಸೆಯ ಅನಿವಾರ್ಯತೆ ಬಗ್ಗೆ ಪೋಷಕರಿಗೆ ತಿಳಿಸಿದ್ದರು.


ಪಾದ ಮತ್ತು ಪಾದದ ಮಣಿಗಂಟು ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ, ಫೂಟ್ ಅಂಡ್ ಆಂಕ್ಲ್ ಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಡಾ ಪ್ರತೀಕ್ಷ್. ಬಿ ಇವರು ಮಗುವಿಗೆ ಪಾದದ ಶಸ್ತ್ರಚಿಕಿತ್ಸೆ ನಡೆಸಿದರು. ಡಾ| ಚೈತ್ರಾ ಆರ್ ಅರೆವಳಿಕೆ ತಜ್ಞರು ಸಹಕರಿಸಿದರು. ಪ್ರಸ್ತುತ ಮಗು ಪೋಷಕರ ಸಹಾಯದಿಂದ ನಡೆದಾಡಲು ಸಮರ್ಥವಾಗಿದೆ. ಮುಂದಿನ ದಿನಗಳಲ್ಲಿ ಅತೀ ಶೀಘ್ರದಲ್ಲಿ ಮಗು ಸ್ವತಂತ್ರವಾಗಿ ನಡೆದಾಡುತ್ತದೆ ಎಂದು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ತಿಳಿಸಿದ್ದಾರೆ.


ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಮತ್ತು ಕೀಲು ವಿಭಾಗದಲ್ಲಿ 4 ಮಂದಿ ಶಸ್ತ್ರಚಿಕಿತ್ಸಾ ತಜ್ಞರಿದ್ದಾರೆ. ಟೋಟಲ್ ನೀ ರಿಪ್ಲೇಸ್‌ಮೆಂಟ್ ಹಾಗೂ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಗಳಂತಹ ಹಲವಾರು ಶಸ್ತ್ರಚಿಕಿತ್ಸೆಯನ್ನು ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಇವರ ಪ್ರೋತ್ಸಾಹದಲ್ಲಿ ಯಶಸ್ವಿಯಾಗಿ ನಡೆಸಲು ಸಾಧ್ಯವಾಗಿದೆ ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!