April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ಕವಳಪಡೂರುನಲ್ಲಿ
ನಡೆದಿರುವ ಬಗ್ಗೆ ವರದಿಯಾಗಿದೆ.

ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಉದ್ಯಾನವನದ ಮುಂಭಾಗದಲ್ಲಿರುವ ಮನೆಯಲ್ಲಿ ಪ್ಲೋರಿನ್ ಪಿಂಟೋ ಮತ್ತು ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದ ವೇಳೆ ಈ ದರೋಡೆ ನಡೆಸಲಾಗಿದ್ದು ಸುಮಾರು 2.90 ಲಕ್ಷ ರೂ ಮೌಲ್ಯದ ಚಿನ್ನಾಭರಣ, 30 ಸಾವಿರ ರೂ ನಗದು ಹಾಗೂ ಒಂದು ಮೊಬೈಲ್ ಫೋನ್ ಸೇರಿ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ದೋಚಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಸುಮಾರು 6.30 ರ ವೇಳೆ ಮನೆಯ ಬೆಲ್ ಬಾರಿಸಿದ್ದು, ಬಾಗಿಲು ತೆರೆದ ಕೂಡಲೇ ಮನೆಯೊಳಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿರುವ ನಗ ನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದಾಗ ಹೆದರಿ ಕಪಾಟಿನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಪ್ಲೋರಿನ್ ಪಿಂಟೋ ಅವರ ಮಗ ಆಸ್ಟಿನ್ ಪಿಂಟೋ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾ ಉಪ ನಿರೀಕ್ಷಕ ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!