24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ಕವಳಪಡೂರುನಲ್ಲಿ
ನಡೆದಿರುವ ಬಗ್ಗೆ ವರದಿಯಾಗಿದೆ.

ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಉದ್ಯಾನವನದ ಮುಂಭಾಗದಲ್ಲಿರುವ ಮನೆಯಲ್ಲಿ ಪ್ಲೋರಿನ್ ಪಿಂಟೋ ಮತ್ತು ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದ ವೇಳೆ ಈ ದರೋಡೆ ನಡೆಸಲಾಗಿದ್ದು ಸುಮಾರು 2.90 ಲಕ್ಷ ರೂ ಮೌಲ್ಯದ ಚಿನ್ನಾಭರಣ, 30 ಸಾವಿರ ರೂ ನಗದು ಹಾಗೂ ಒಂದು ಮೊಬೈಲ್ ಫೋನ್ ಸೇರಿ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ದೋಚಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಸುಮಾರು 6.30 ರ ವೇಳೆ ಮನೆಯ ಬೆಲ್ ಬಾರಿಸಿದ್ದು, ಬಾಗಿಲು ತೆರೆದ ಕೂಡಲೇ ಮನೆಯೊಳಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿರುವ ನಗ ನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದಾಗ ಹೆದರಿ ಕಪಾಟಿನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಪ್ಲೋರಿನ್ ಪಿಂಟೋ ಅವರ ಮಗ ಆಸ್ಟಿನ್ ಪಿಂಟೋ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾ ಉಪ ನಿರೀಕ್ಷಕ ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya
error: Content is protected !!