September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ಕವಳಪಡೂರುನಲ್ಲಿ
ನಡೆದಿರುವ ಬಗ್ಗೆ ವರದಿಯಾಗಿದೆ.

ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಉದ್ಯಾನವನದ ಮುಂಭಾಗದಲ್ಲಿರುವ ಮನೆಯಲ್ಲಿ ಪ್ಲೋರಿನ್ ಪಿಂಟೋ ಮತ್ತು ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದ ವೇಳೆ ಈ ದರೋಡೆ ನಡೆಸಲಾಗಿದ್ದು ಸುಮಾರು 2.90 ಲಕ್ಷ ರೂ ಮೌಲ್ಯದ ಚಿನ್ನಾಭರಣ, 30 ಸಾವಿರ ರೂ ನಗದು ಹಾಗೂ ಒಂದು ಮೊಬೈಲ್ ಫೋನ್ ಸೇರಿ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ದೋಚಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಸುಮಾರು 6.30 ರ ವೇಳೆ ಮನೆಯ ಬೆಲ್ ಬಾರಿಸಿದ್ದು, ಬಾಗಿಲು ತೆರೆದ ಕೂಡಲೇ ಮನೆಯೊಳಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿರುವ ನಗ ನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದಾಗ ಹೆದರಿ ಕಪಾಟಿನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಪ್ಲೋರಿನ್ ಪಿಂಟೋ ಅವರ ಮಗ ಆಸ್ಟಿನ್ ಪಿಂಟೋ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾ ಉಪ ನಿರೀಕ್ಷಕ ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!