22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ಕವಳಪಡೂರುನಲ್ಲಿ
ನಡೆದಿರುವ ಬಗ್ಗೆ ವರದಿಯಾಗಿದೆ.

ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಉದ್ಯಾನವನದ ಮುಂಭಾಗದಲ್ಲಿರುವ ಮನೆಯಲ್ಲಿ ಪ್ಲೋರಿನ್ ಪಿಂಟೋ ಮತ್ತು ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದ ವೇಳೆ ಈ ದರೋಡೆ ನಡೆಸಲಾಗಿದ್ದು ಸುಮಾರು 2.90 ಲಕ್ಷ ರೂ ಮೌಲ್ಯದ ಚಿನ್ನಾಭರಣ, 30 ಸಾವಿರ ರೂ ನಗದು ಹಾಗೂ ಒಂದು ಮೊಬೈಲ್ ಫೋನ್ ಸೇರಿ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ದೋಚಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಸುಮಾರು 6.30 ರ ವೇಳೆ ಮನೆಯ ಬೆಲ್ ಬಾರಿಸಿದ್ದು, ಬಾಗಿಲು ತೆರೆದ ಕೂಡಲೇ ಮನೆಯೊಳಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿರುವ ನಗ ನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದಾಗ ಹೆದರಿ ಕಪಾಟಿನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಪ್ಲೋರಿನ್ ಪಿಂಟೋ ಅವರ ಮಗ ಆಸ್ಟಿನ್ ಪಿಂಟೋ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾ ಉಪ ನಿರೀಕ್ಷಕ ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya
error: Content is protected !!