24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಠಾರದಲ್ಲಿ ಇರುವ ಉಜಿರೆಯ ಸದ್ಭಾವನೆಯ ಗೋಡೆಯಾದ ಎಸ್.ಡಿ.ಎಂ ವಾಲ್ ಆಫ್ ಗುಡ್ ವಿಲ್ ಇದಕ್ಕೆ ನಿತ್ಯೋಪಯೋಗಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.


ವಿದ್ಯಾರ್ಥಿ ಸ್ವಯಂ ಸೇವಕ ಬೋರೇಶ್ ಅವರು ಯುವದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಅವರ ನೇತೃತ್ವದಲ್ಲಿ ಉಜಿರೆ ಪರಿಸರದ ಸ್ವಚ್ಛತೆ ಕಾರ್ಯವನ್ನು ಮಾಡಲಾಯಿತು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಸ್ವಯಂ ಸೇವಕ ಆದಿತ್ಯ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!