23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ಜ. 12 ರಂದು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧ.ಮಂ.ಸ್ವಾಯತ್ತ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕರಾದ ಡಾ.ಶ್ರೀಧರ್ ಭಟ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಇವತ್ತಿನ ದಿನ ಯುವಜನರ ಪ್ರೀತಿ ಯುವ ಜನರಿಂದಲೇ ಅಭಿವೃದ್ಧಿ ಎಂಬ ಉದ್ದೇಶ ಇಟ್ಕೊಂಡು ಆಚರಿಸಲಾಗುತ್ತಿದ್ದು ಅತಿ ಹೆಚ್ಚು ಯುವಜನ ಇರುವ ಭಾರತ ದೇಶವನ್ನು ಪುನರ್ಜೀವನ ಮಾಡಲು ಯುವ ಜನರಿಂದಲೇ ಸಾಧ್ಯ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಳ್ಳಬೇಕು ಇಲ್ಲವಾದಲ್ಲಿ ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ. ನಿಮ್ಮಲ್ಲಿ ಅದ್ಬುತವಾದ ಭವಿಷ್ಯವಿದೆ ಅದನ್ನು ಸರಿಯಾಗಿ ಬಳಸಿದರೆ ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಸಾದ್ಯ ಎಂಬ ಸ್ವಾಮಿ ವಿವೇಕಾನಂದರ ಮಾತುಗಳನ್ನು ಪುನರುಚ್ಚಿಸಿದ ಅವರು ವಿದ್ಯಾರ್ಥಿಗಳು ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಚಾರಿತ್ಯ ಈ ಮೂರು ಗುಣಗಳನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿ ಕೊಂಡಲ್ಲಿ ಯಾವುದೇ ಕೆಲಸದಲ್ಲೂ ಯಶಸ್ಸು ಗ್ಯಾರಂಟಿ. ಯಾವುದೇ ಕೆಲಸವನ್ನು ಆಲೋಚಿಸಿ ಮಾಡಿ, ಹಿತವಾಗುವಂತೆ ಮಾತನಾಡಿ ಎಂದು ಹೇಳಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಇವರು ಮಾತನಾಡಿ ವಿವೇಕಾನಂದರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸೋಣ ಎಂದು ವಿನಂತಿ ಮಾಡಿಕೊಂಡರು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಲಿನಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ನಾಗಶ್ರೀ ಅತಿಥಿಗಳ ಪರಿಚಯಿಸಿ ಸ್ವಾಗತಿಸಿ ವಂದಿಸಿದರು‌

Related posts

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya
error: Content is protected !!