July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ : ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಇದರ ವತಿಯಿಂದ ಹಿದಾಯತುಲ್ ಇಸ್ಲಾಮ್ ಸೆಕೆಂಡರಿ ಮದರಸ ಪೇರಲ್ದಕಟ್ಟೆಯಲ್ಲಿ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮ ಜ. 10 ರಂದು ನಡೆಯಿತು.

ಪೇರಲ್ದಕಟ್ಟೆ ಜುಮಾ ಮಸೀದಿಯ ಖತೀಬರಾದ ಶಂಶುದ್ದೀನ್ ದಾರಿಮಿಯವರು ದುಆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮತ್ತು ನೂತನ ಸಮಿತಿಯ ರಚನೆಯ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್ ಕಟ್ಟೆ ವಾರ್ಷಿಕ ವರದಿ ವಾಚಿಸಿದರು. ವಾರ್ಷಿಕ ವರದಿಗೆ ಮನ್ನಣೆ ಪಡೆದ ನಂತರ ನೂತನ ಸಮಿತಿಯ ರಚನೆಯು ಸಮಿತಿಯ ತಾಲೂಕು ವೀಕ್ಷಕರಾದ ಅಬುಬಕ್ಕರ್ ನಿಜಾಮಿ ಮತ್ತು ಯಾಸೀರ್ ಚಿಬಿದ್ರೆಯವರ ಸಮ್ಮುಖದಲ್ಲಿ ನಡೆಯಿತು.

ಗುರುವಾಯನಕೆರೆ ಕ್ಲಸ್ಟರಿನ ನೂತನ ಅಧ್ಯಕ್ಷರಾಗಿ ಎರಡನೇ ಬಾರಿ ಇಸುಬು ಪೂಂಜಿಲ್ಲಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಲೈಮಾನ್ ಕಟ್ಟೆ ಅದೇ ರೀತಿಯಾಗಿ ಕೋಶಾಧಿಕಾರಿಯಾಗಿ ಸಿರಾಜ್ ಚಿಲಿಂಬಿ ಯವರು ಆಯ್ಕೆಯಾದರು.

ವರ್ಕಿಂಗ್ ಕಾರ್ಯದರ್ಶಿಯಾಗಿ ಅಲ್ತಾಫ್ ಕಟ್ಟೆ, ಉಪವರ್ಕಿಂಗ್ ಕಾರ್ಯದರ್ಶಿಯಾಗಿ ಸಮೀರ್ ಕನ್ನಡಿಕಟ್ಟೆ,
ಮನ್ಸೂರ್ ಕಟ್ಟೆ, ಕಾರ್ಯದರ್ಶಿಯಾಗಿ ಸಮೀರ್, ಉಪಕಾರ್ಯದರ್ಶಿಯಾಗಿ ಹೈದರ್ ಮಾಸ್ಟರ್ ಜಾರಿಗೆಬೈಲು, ನೌಷಾದ್ ಸಾಬರಬೈಲು, ಝೋನ್ ಕೌನ್ಸಿಲ್ಲೆರ್ಸ್ ಯಾಗಿ ರಝಕ್ ಕಟ್ಟೆ, ಸಾದಿಕ್ ಕಟ್ಟೆ, ಇಲ್ಯಾಸ್ ಚಿಲಿಂಬಿ, ಸಿರಾಜ್ ಚಿಲಿಂಬಿ, ಮನ್ಸೂರ್ ಪಾದೆ, ಇಸ್ಮಾಯಿಲ್ ಕಿಂಗ್ ಸ್ಟಾರ್, ಶಿಹಾಬ್ ಜಾರಿಗೆಬೈಲು, ಶರೀಫ್ ಶಬರಿಬೈಲು ಹಂಝ ಕನ್ನಡಿಕಟ್ಟೆ, ಯಾಸೀರ್ ಗೋಳಿಯಂಗಡಿ ಆಯ್ಕೆಯಾದರು.

Related posts

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya
error: Content is protected !!