23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ : ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಇದರ ವತಿಯಿಂದ ಹಿದಾಯತುಲ್ ಇಸ್ಲಾಮ್ ಸೆಕೆಂಡರಿ ಮದರಸ ಪೇರಲ್ದಕಟ್ಟೆಯಲ್ಲಿ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮ ಜ. 10 ರಂದು ನಡೆಯಿತು.

ಪೇರಲ್ದಕಟ್ಟೆ ಜುಮಾ ಮಸೀದಿಯ ಖತೀಬರಾದ ಶಂಶುದ್ದೀನ್ ದಾರಿಮಿಯವರು ದುಆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮತ್ತು ನೂತನ ಸಮಿತಿಯ ರಚನೆಯ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್ ಕಟ್ಟೆ ವಾರ್ಷಿಕ ವರದಿ ವಾಚಿಸಿದರು. ವಾರ್ಷಿಕ ವರದಿಗೆ ಮನ್ನಣೆ ಪಡೆದ ನಂತರ ನೂತನ ಸಮಿತಿಯ ರಚನೆಯು ಸಮಿತಿಯ ತಾಲೂಕು ವೀಕ್ಷಕರಾದ ಅಬುಬಕ್ಕರ್ ನಿಜಾಮಿ ಮತ್ತು ಯಾಸೀರ್ ಚಿಬಿದ್ರೆಯವರ ಸಮ್ಮುಖದಲ್ಲಿ ನಡೆಯಿತು.

ಗುರುವಾಯನಕೆರೆ ಕ್ಲಸ್ಟರಿನ ನೂತನ ಅಧ್ಯಕ್ಷರಾಗಿ ಎರಡನೇ ಬಾರಿ ಇಸುಬು ಪೂಂಜಿಲ್ಲಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಲೈಮಾನ್ ಕಟ್ಟೆ ಅದೇ ರೀತಿಯಾಗಿ ಕೋಶಾಧಿಕಾರಿಯಾಗಿ ಸಿರಾಜ್ ಚಿಲಿಂಬಿ ಯವರು ಆಯ್ಕೆಯಾದರು.

ವರ್ಕಿಂಗ್ ಕಾರ್ಯದರ್ಶಿಯಾಗಿ ಅಲ್ತಾಫ್ ಕಟ್ಟೆ, ಉಪವರ್ಕಿಂಗ್ ಕಾರ್ಯದರ್ಶಿಯಾಗಿ ಸಮೀರ್ ಕನ್ನಡಿಕಟ್ಟೆ,
ಮನ್ಸೂರ್ ಕಟ್ಟೆ, ಕಾರ್ಯದರ್ಶಿಯಾಗಿ ಸಮೀರ್, ಉಪಕಾರ್ಯದರ್ಶಿಯಾಗಿ ಹೈದರ್ ಮಾಸ್ಟರ್ ಜಾರಿಗೆಬೈಲು, ನೌಷಾದ್ ಸಾಬರಬೈಲು, ಝೋನ್ ಕೌನ್ಸಿಲ್ಲೆರ್ಸ್ ಯಾಗಿ ರಝಕ್ ಕಟ್ಟೆ, ಸಾದಿಕ್ ಕಟ್ಟೆ, ಇಲ್ಯಾಸ್ ಚಿಲಿಂಬಿ, ಸಿರಾಜ್ ಚಿಲಿಂಬಿ, ಮನ್ಸೂರ್ ಪಾದೆ, ಇಸ್ಮಾಯಿಲ್ ಕಿಂಗ್ ಸ್ಟಾರ್, ಶಿಹಾಬ್ ಜಾರಿಗೆಬೈಲು, ಶರೀಫ್ ಶಬರಿಬೈಲು ಹಂಝ ಕನ್ನಡಿಕಟ್ಟೆ, ಯಾಸೀರ್ ಗೋಳಿಯಂಗಡಿ ಆಯ್ಕೆಯಾದರು.

Related posts

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya
error: Content is protected !!