28.6 C
ಪುತ್ತೂರು, ಬೆಳ್ತಂಗಡಿ
March 31, 2025
ಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

ಕಾರ್ಯತ್ತಡ್ಕ : ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮಾದಿನಾಚರಣೆಯನ್ನು ಜ.12 ರಂದು ಆಚರಿಸಲಾಯಿತು.

ಪ್ರೌಢ ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸಭಾಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಹೆಚ್.ಜಿಎಫ್ ಸಂತೋಷ್ ಜೈನ್, ಸಂಪನ್ಮೂಲ ವ್ಯಕ್ತಿ ವಿನಾಯಕ ಜೋಶಿ, ನಿಕಟಪೂರ್ವ ಅಧ್ಯಕ್ಷ ಜೆಸಿಐ ಸೀನಿಯರ್ ಜೀತೇಶ್ ಪಿರೇರಾ, ಯೋಜನಾ ನಿರ್ದೇಶಕ ಜೆ.ಎಫ್ .ಎಮ್. ಶ್ರೀಧರ ರಾವ್, ಜೂನಿಯರ್ ಜೆಸಿ ಅಧ್ಯಕ್ಷ ಜೆಸಿ ಹರ್ಷಿತ್ ಗೌಡ , ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಉಪಸ್ಥಿತರಿದ್ದರು.

ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಕನ್ನಡ ಪಂಡಿತರಾದ ವಿನಾಯಕ ಜೋಶಿಯವರು ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ತೀಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮಕ್ಕಳು , ಜೆಸಿ ಹೆಚ್.ಜಿಎಫ್ ಜೋಸೆಫ್ ಪಿರೇರಾ, ಜೆಸಿ ಹೆಚ್.ಜಿಎಫ್ ಜೇಸಿಂತಾ ಡಿಸೋಜ, ಮತ್ತು ಜೆಸಿ ರಾಜಾರಾಮ ಟಿ., ಉಪಸ್ಥಿತರಿದ್ದರು.

ಜೆಸಿ ಸಂತೋಷ್ ಜೈನ್ ಸ್ವಾಗತಿಸಿ, ಶ್ರೀಧರ್ ರಾವ್ ಜೇಸಿವಾಣಿ ವಾಚಿಸಿದರು. ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!