23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

ಕಾರ್ಯತ್ತಡ್ಕ : ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮಾದಿನಾಚರಣೆಯನ್ನು ಜ.12 ರಂದು ಆಚರಿಸಲಾಯಿತು.

ಪ್ರೌಢ ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸಭಾಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಹೆಚ್.ಜಿಎಫ್ ಸಂತೋಷ್ ಜೈನ್, ಸಂಪನ್ಮೂಲ ವ್ಯಕ್ತಿ ವಿನಾಯಕ ಜೋಶಿ, ನಿಕಟಪೂರ್ವ ಅಧ್ಯಕ್ಷ ಜೆಸಿಐ ಸೀನಿಯರ್ ಜೀತೇಶ್ ಪಿರೇರಾ, ಯೋಜನಾ ನಿರ್ದೇಶಕ ಜೆ.ಎಫ್ .ಎಮ್. ಶ್ರೀಧರ ರಾವ್, ಜೂನಿಯರ್ ಜೆಸಿ ಅಧ್ಯಕ್ಷ ಜೆಸಿ ಹರ್ಷಿತ್ ಗೌಡ , ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಉಪಸ್ಥಿತರಿದ್ದರು.

ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಕನ್ನಡ ಪಂಡಿತರಾದ ವಿನಾಯಕ ಜೋಶಿಯವರು ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ತೀಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮಕ್ಕಳು , ಜೆಸಿ ಹೆಚ್.ಜಿಎಫ್ ಜೋಸೆಫ್ ಪಿರೇರಾ, ಜೆಸಿ ಹೆಚ್.ಜಿಎಫ್ ಜೇಸಿಂತಾ ಡಿಸೋಜ, ಮತ್ತು ಜೆಸಿ ರಾಜಾರಾಮ ಟಿ., ಉಪಸ್ಥಿತರಿದ್ದರು.

ಜೆಸಿ ಸಂತೋಷ್ ಜೈನ್ ಸ್ವಾಗತಿಸಿ, ಶ್ರೀಧರ್ ರಾವ್ ಜೇಸಿವಾಣಿ ವಾಚಿಸಿದರು. ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya
error: Content is protected !!