22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

ಕಾರ್ಯತ್ತಡ್ಕ : ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮಾದಿನಾಚರಣೆಯನ್ನು ಜ.12 ರಂದು ಆಚರಿಸಲಾಯಿತು.

ಪ್ರೌಢ ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸಭಾಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಹೆಚ್.ಜಿಎಫ್ ಸಂತೋಷ್ ಜೈನ್, ಸಂಪನ್ಮೂಲ ವ್ಯಕ್ತಿ ವಿನಾಯಕ ಜೋಶಿ, ನಿಕಟಪೂರ್ವ ಅಧ್ಯಕ್ಷ ಜೆಸಿಐ ಸೀನಿಯರ್ ಜೀತೇಶ್ ಪಿರೇರಾ, ಯೋಜನಾ ನಿರ್ದೇಶಕ ಜೆ.ಎಫ್ .ಎಮ್. ಶ್ರೀಧರ ರಾವ್, ಜೂನಿಯರ್ ಜೆಸಿ ಅಧ್ಯಕ್ಷ ಜೆಸಿ ಹರ್ಷಿತ್ ಗೌಡ , ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಉಪಸ್ಥಿತರಿದ್ದರು.

ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಕನ್ನಡ ಪಂಡಿತರಾದ ವಿನಾಯಕ ಜೋಶಿಯವರು ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ತೀಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮಕ್ಕಳು , ಜೆಸಿ ಹೆಚ್.ಜಿಎಫ್ ಜೋಸೆಫ್ ಪಿರೇರಾ, ಜೆಸಿ ಹೆಚ್.ಜಿಎಫ್ ಜೇಸಿಂತಾ ಡಿಸೋಜ, ಮತ್ತು ಜೆಸಿ ರಾಜಾರಾಮ ಟಿ., ಉಪಸ್ಥಿತರಿದ್ದರು.

ಜೆಸಿ ಸಂತೋಷ್ ಜೈನ್ ಸ್ವಾಗತಿಸಿ, ಶ್ರೀಧರ್ ರಾವ್ ಜೇಸಿವಾಣಿ ವಾಚಿಸಿದರು. ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!