25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

ಕಾರ್ಯತ್ತಡ್ಕ : ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮಾದಿನಾಚರಣೆಯನ್ನು ಜ.12 ರಂದು ಆಚರಿಸಲಾಯಿತು.

ಪ್ರೌಢ ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸಭಾಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಹೆಚ್.ಜಿಎಫ್ ಸಂತೋಷ್ ಜೈನ್, ಸಂಪನ್ಮೂಲ ವ್ಯಕ್ತಿ ವಿನಾಯಕ ಜೋಶಿ, ನಿಕಟಪೂರ್ವ ಅಧ್ಯಕ್ಷ ಜೆಸಿಐ ಸೀನಿಯರ್ ಜೀತೇಶ್ ಪಿರೇರಾ, ಯೋಜನಾ ನಿರ್ದೇಶಕ ಜೆ.ಎಫ್ .ಎಮ್. ಶ್ರೀಧರ ರಾವ್, ಜೂನಿಯರ್ ಜೆಸಿ ಅಧ್ಯಕ್ಷ ಜೆಸಿ ಹರ್ಷಿತ್ ಗೌಡ , ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಉಪಸ್ಥಿತರಿದ್ದರು.

ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಕನ್ನಡ ಪಂಡಿತರಾದ ವಿನಾಯಕ ಜೋಶಿಯವರು ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ತೀಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮಕ್ಕಳು , ಜೆಸಿ ಹೆಚ್.ಜಿಎಫ್ ಜೋಸೆಫ್ ಪಿರೇರಾ, ಜೆಸಿ ಹೆಚ್.ಜಿಎಫ್ ಜೇಸಿಂತಾ ಡಿಸೋಜ, ಮತ್ತು ಜೆಸಿ ರಾಜಾರಾಮ ಟಿ., ಉಪಸ್ಥಿತರಿದ್ದರು.

ಜೆಸಿ ಸಂತೋಷ್ ಜೈನ್ ಸ್ವಾಗತಿಸಿ, ಶ್ರೀಧರ್ ರಾವ್ ಜೇಸಿವಾಣಿ ವಾಚಿಸಿದರು. ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!