24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ 178/18 u/s 323,325 IPC ಗಲಾಟೆ ಪ್ರಕರಣ ನಡೆದ‌ ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳ ಕಾಲ ಊರು ಬಿಟ್ಟು ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪುತ್ತೂರು ತಾಲೂಕಿನ ಕಲ್ಲಗುಡ್ಡೆ, ನೂಜಿಬಾಲ್ತಿಲ ಗ್ರಾಮದ ಮಂಜೋಲಿ ನಿವಾಸಿ ವರ್ಗೀಸ್ ಯಾನೆ ರಾಜನ್ ಎಂಬವರ ಪುತ್ರ ಪ್ರಬೀನ ಯಾನೆ ಪ್ರವೀಣ(34) ಎಂಬಾತ ಊರಿಗೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಜನವರಿ 11ರಂದು ಮದ್ಯಾಹ್ನ 1 ಗಂಟೆಗೆ ಪುತ್ತೂರು ತಾಲೂಕು ನೂಜಿಬಾಲ್ತಿಲ ಬಸ್ಸು ತಂಗುದಾಣದ ಬಳಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿಹಾಗೂ ಧರ್ಮಸ್ಥಳ ಠಾಣಾ ಪೊಲೀಸ್ ಉಪ-ನಿರೀಕ್ಷಕರಾದ ಅನಿಲ್ ಕುಮಾರ್ ಡಿ. ಮಾರ್ಗದರ್ಶನದಂತೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ರಾಜೇಶ್.ಎನ್ ಮತ್ತು ಗೋವಿಂದ ರಾಜ್ ರವರು ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಜೆಮ್ ಎಫ್.ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!