23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ 178/18 u/s 323,325 IPC ಗಲಾಟೆ ಪ್ರಕರಣ ನಡೆದ‌ ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳ ಕಾಲ ಊರು ಬಿಟ್ಟು ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪುತ್ತೂರು ತಾಲೂಕಿನ ಕಲ್ಲಗುಡ್ಡೆ, ನೂಜಿಬಾಲ್ತಿಲ ಗ್ರಾಮದ ಮಂಜೋಲಿ ನಿವಾಸಿ ವರ್ಗೀಸ್ ಯಾನೆ ರಾಜನ್ ಎಂಬವರ ಪುತ್ರ ಪ್ರಬೀನ ಯಾನೆ ಪ್ರವೀಣ(34) ಎಂಬಾತ ಊರಿಗೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಜನವರಿ 11ರಂದು ಮದ್ಯಾಹ್ನ 1 ಗಂಟೆಗೆ ಪುತ್ತೂರು ತಾಲೂಕು ನೂಜಿಬಾಲ್ತಿಲ ಬಸ್ಸು ತಂಗುದಾಣದ ಬಳಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿಹಾಗೂ ಧರ್ಮಸ್ಥಳ ಠಾಣಾ ಪೊಲೀಸ್ ಉಪ-ನಿರೀಕ್ಷಕರಾದ ಅನಿಲ್ ಕುಮಾರ್ ಡಿ. ಮಾರ್ಗದರ್ಶನದಂತೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ರಾಜೇಶ್.ಎನ್ ಮತ್ತು ಗೋವಿಂದ ರಾಜ್ ರವರು ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಜೆಮ್ ಎಫ್.ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya
error: Content is protected !!