July 23, 2026
Uncategorized

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಾಗಿದ್ದ ಮಂಗಳೂರು ತಾಲೂಕು ಹೊಸಬೆಟ್ಟು, ಸುರತ್ಕಲ್‌, ನಂದಶ್ರೀ ಅಪಾರ್ಟ್‌ ಮೆಂಟ್‌, ಮುಖ್ಯ ಪ್ರಾಣ ಮಠದ ಬಳಿಯ ನಿವಾಸಿ ಸುಧಾಕರ(58) ಎಂಬವರು ನಾಪತ್ತೆಯಾಗಿರುವುದಾಗಿ ಜ.13 ರಂದು ವೇಣೂರು ಠಾಣೆಗೆ ದೂರು ನೀಡಲಾಗಿದೆ.

ಸುಧಾಕರ ಅವರು ಸುಮಾರು 20 ವರ್ಷಗಳಿಂದ, ಮನೆಬಿಟ್ಟು ಸಿಕ್ಕಿದಲ್ಲಿ ಸುತ್ತಾಡಿಕೊಂಡಿದ್ದವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು ಅಪರೂಪಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದವರು, ಇತ್ತೀಚೆಗೆ ಮಾನಸಿಕ ಖಿನ್ನತೆಗೊಳಪಟ್ಟು ಪಣಂಬೂರು, ಬೈಕಂಪಾಡಿ ವಠಾರದಲ್ಲಿ ತುಂಬಾ ಕೀಟಲೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವನನ್ನು ಪಡುಬಿದ್ರೆ ಆಶ್ರಮದವರು ತಮ್ಮ ಆಶ್ರಮದಲ್ಲಿ ಸೇರಿಸಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಬಿತ್ತರಿಸಿದ್ದನ್ನು ಕಂಡು ಅವರನ್ನು ಅಲ್ಲಿಂದ ಕರೆದುಕೊಂಡು ಬಂದು ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಿಸಿದ್ದು, ಸದ್ರಿ ಸುಧಾಕರ ಜ.9 ರಂದು ರಾತ್ರಿ ಸುಮಾರು 12 ಗಂಟೆಯ ಬಳಿಕ ಆಶ್ರಮದಿಂದ ಕಾಣೆಯಾಗಿದ್ದು, ಈ ಬಗ್ಗೆ ಆಶ್ರಮದ ಮುಖ್ಯಸ್ಥರು ನೀಡಿದ ಮಾಹಿತಿಯಂತೆ ಅವರು ಸಹೋದರ ವಿಜಯ ಎಂ.ಆಶ್ರಮಕ್ಕೆ ಬಂದು ವಿಚಾರಿಸಿ ಬಳಿಕ ಸಂಬಂಧಿಕರ ಮನೆಗಳಿಗೆಲ್ಲಾ ಸಂಪರ್ಕಿಸಿ, ಭೇಟಿ ನೀಡಿ ವಿಚಾರಿಸಿದ್ದಲ್ಲದೇ, ಪಣಂಬೂರು, ಬೈಕಂಪಾಡಿ, ಸುರತ್ಕಲ್ ವಠಾರಗಳಲ್ಲಿ ಹುಡುಕಾಡಿ ಪತ್ತೆಯಾಗದೇ ಇದ್ದಾಗ ತಡವಾಗಿ ಬಂದು ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!