25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಾಗಿದ್ದ ಮಂಗಳೂರು ತಾಲೂಕು ಹೊಸಬೆಟ್ಟು, ಸುರತ್ಕಲ್‌, ನಂದಶ್ರೀ ಅಪಾರ್ಟ್‌ ಮೆಂಟ್‌, ಮುಖ್ಯ ಪ್ರಾಣ ಮಠದ ಬಳಿಯ ನಿವಾಸಿ ಸುಧಾಕರ(58) ಎಂಬವರು ನಾಪತ್ತೆಯಾಗಿರುವುದಾಗಿ ಜ.13 ರಂದು ವೇಣೂರು ಠಾಣೆಗೆ ದೂರು ನೀಡಲಾಗಿದೆ.

ಸುಧಾಕರ ಅವರು ಸುಮಾರು 20 ವರ್ಷಗಳಿಂದ, ಮನೆಬಿಟ್ಟು ಸಿಕ್ಕಿದಲ್ಲಿ ಸುತ್ತಾಡಿಕೊಂಡಿದ್ದವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು ಅಪರೂಪಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದವರು, ಇತ್ತೀಚೆಗೆ ಮಾನಸಿಕ ಖಿನ್ನತೆಗೊಳಪಟ್ಟು ಪಣಂಬೂರು, ಬೈಕಂಪಾಡಿ ವಠಾರದಲ್ಲಿ ತುಂಬಾ ಕೀಟಲೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವನನ್ನು ಪಡುಬಿದ್ರೆ ಆಶ್ರಮದವರು ತಮ್ಮ ಆಶ್ರಮದಲ್ಲಿ ಸೇರಿಸಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಬಿತ್ತರಿಸಿದ್ದನ್ನು ಕಂಡು ಅವರನ್ನು ಅಲ್ಲಿಂದ ಕರೆದುಕೊಂಡು ಬಂದು ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಿಸಿದ್ದು, ಸದ್ರಿ ಸುಧಾಕರ ಜ.9 ರಂದು ರಾತ್ರಿ ಸುಮಾರು 12 ಗಂಟೆಯ ಬಳಿಕ ಆಶ್ರಮದಿಂದ ಕಾಣೆಯಾಗಿದ್ದು, ಈ ಬಗ್ಗೆ ಆಶ್ರಮದ ಮುಖ್ಯಸ್ಥರು ನೀಡಿದ ಮಾಹಿತಿಯಂತೆ ಅವರು ಸಹೋದರ ವಿಜಯ ಎಂ.ಆಶ್ರಮಕ್ಕೆ ಬಂದು ವಿಚಾರಿಸಿ ಬಳಿಕ ಸಂಬಂಧಿಕರ ಮನೆಗಳಿಗೆಲ್ಲಾ ಸಂಪರ್ಕಿಸಿ, ಭೇಟಿ ನೀಡಿ ವಿಚಾರಿಸಿದ್ದಲ್ಲದೇ, ಪಣಂಬೂರು, ಬೈಕಂಪಾಡಿ, ಸುರತ್ಕಲ್ ವಠಾರಗಳಲ್ಲಿ ಹುಡುಕಾಡಿ ಪತ್ತೆಯಾಗದೇ ಇದ್ದಾಗ ತಡವಾಗಿ ಬಂದು ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!